Webdunia - Bharat's app for daily news and videos

Install App

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ !

Webdunia
ಶುಕ್ರವಾರ, 13 ಮೇ 2022 (13:15 IST)
ಬೆಂಗಳೂರು: ಮೌಲ್ಯಮಾಪನದಲ್ಲಿ ಸಣ್ಣಪುಟ್ಟದೋಷ ಸರಿಪಡಿಸುವುದು ಸೇರಿದಂತೆ ವಿವಿಧ ಕಾರಣಗಳಿಂದ ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮೇ 19ಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಇದೇ ವೇಳೆ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿಯೂ ಸಿಕ್ಕಿದೆ.
 
ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟುಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್‌ ಅಂಕ ನೀಡಿ ಪಾಸ್‌ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಿಕ್ಷ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.
 
2021ರ ಪೂರಕ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕದಿಂದಾಗಿ ಶೇ.9ರಷ್ಟುವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದರು. ಸುಮಾರು 13 ವಿದ್ಯಾರ್ಥಿಗಳಿಗೆ ಗರಿಷ್ಠ 26 ಅಂಕಗಳನ್ನು ನೀಡಲಾಗಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಆರಂಭದಲ್ಲಿ ಸರಿಯಾಗಿ ತರಗತಿಗಳು ನಡೆದಿಲ್ಲ. ಹೀಗಾಗಿ ಮಕ್ಕಳಲ್ಲಿ ಕಲಿಕೆಯ ಕೊರತೆ ಸಹಜ ಎಂದು ಗ್ರೇಸ್‌ ಅಂಕ ನೀಡಲಾಗುತ್ತಿದೆ. ಬಹುಶಃ ಈ ಬಾರಿಯೂ ಗ್ರೇಸ್‌ ಅಂಕ ಪಡೆದು ಪಾಸಾಗುವ ಮಕ್ಕಳ ಸಂಖ್ಯೆ ಹೆಚ್ಚೇ ಇರುತ್ತದೆ ಎಂದು ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.
 
ಅಧಿಕಾರಿಗಳು ಹೇಳುವ ಪ್ರಕಾರ ಗ್ರೇಸ್‌ ಅಂಕ ನೀಡಿಕೆ ಹೊಸದೇನಲ್ಲ, ನಿಯಮಾವಳಿಯಲ್ಲೇ ಇದಕ್ಕೆ ಮೊದಲಿಂದಲೂ ಅವಕಾಶವಿದೆ. ಫಲಿತಾಂಶ ಉತ್ತಮಗೊಳಿಸುವ ಕಾರಣದಿಂದ ಗರಿಷ್ಠ ಮೂರು ವಿಷಯಗಳಿಗೆ ಶೇ.5ರಷ್ಟುಗ್ರೇಸ್‌ ಅಂಕ ನೀಡುವ ಮಾನದಂಡ ಅನುಸರಿಸಿಕೊಂಡು ಬರಲಾಗುತ್ತಿದೆ. ಆದರೆ, ಕೋವಿಡ್‌ನಿಂದ ಶಾಲೆಗಳು ಆರಂಭವಾಗದೆ ಮಕ್ಕಳಿಗೆ ಭೌತಿಕ ತರಗತಿಗಳು ನಡೆಯದೆ ಕಲಿಕೆಯಲ್ಲಿ ಹಿಂದುಳಿದ ಕಾರಣ 2021ರಲ್ಲಿ ಮಂಡಳಿಯು ಇದನ್ನು ಶೇ.10ಕ್ಕೆ ಹೆಚ್ಚಿಸಿತ್ತು.
 
2021ರ ವಾರ್ಷಿಕ ಪರೀಕ್ಷೆಯನ್ನು ಎರಡೇ ದಿನದಲ್ಲಿ ಮುಗಿಸಿ ಸಾಮೂಹಿಕವಾಗಿ ಎಲ್ಲರನ್ನೂ ಪಾಸ್‌ ಮಾಡಿದ್ದರಿಂದ ಆಗ ಗ್ರೇಸ್‌ ಅಂಕದ ಪ್ರಶ್ನೆ ಉದ್ಭವಿಸಿರಲಿಲ್ಲ. ಆದರೆ, ನಂತರ ನಡೆದ ಪೂರಕ ಪರೀಕ್ಷೆಯಲ್ಲಿ ಶೇ.10 ಗ್ರೇಸ್‌ ಅಂಕಗಳನ್ನು ನೀಡಲಾಗಿತ್ತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments