Webdunia - Bharat's app for daily news and videos

Install App

ನಾಳೆ ರಾಜ್ಯದ ಜನರಿಗೆ ಸಿಹಿ ಸುದ್ದಿ

Webdunia
ಮಂಗಳವಾರ, 29 ಆಗಸ್ಟ್ 2023 (18:00 IST)
ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಜಾರಿಗೆ ಕ್ಷಣಗಣನೆ ಶುರುವಾಗಿದ್ದು,ನಾಳೆ ಮೈಸೂರಿನಲ್ಲಿ ಗೃಹ ಲಕ್ಷ್ಮೀ  ಯೋಜನೆಗೆ ಚಾಲನೆ ಸಿಗಲಿದೆ.ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಿದವರ ಖಾತೆಗೆ 2000 ರೂ. ಸೇರಲಿದೆ.ಗೃಹ ಲಕ್ಷ್ಮೀ ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ನಾಳೆ ಮೈಸೂರಿನಲ್ಲಿ ಗೃಹ ಲಕ್ಷ್ಮೀ  ಯೋಜನೆಗೆ ಚಾಲನೆ ಸಿಗಲಿದೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಿಂದ ಚಾಲನೆ  ನೀಡಲಿದ್ದಾರೆ.
 
ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆಶಿವಕುಮಾರ್,ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು,ಸೂಮಾರು 1ಲಕ್ಷ ಜನ ಸೇರಿಸುವ ಗುರಿ ಇದೆ.ದೊಡ್ಡ ಮಟ್ಟದಲ್ಲಿ ರಾಜ್ಯ ಸರ್ಕಾರ ಕಾರ್ಯಕ್ರಮ ಮಾಡ್ತಿದ್ದು,ಈ ವೇಳೆ ಸರ್ಕಾರದ 100 ದಿನಗಳ ಸಾಧನೆ ಪುಸ್ತಕ ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ.ಸಿದ್ದರಾಮಯ್ಯ ಸರ್ಕಾರಕ್ಕೆ 100 ದಿನಗಳ ಸಂಭ್ರಮವನ್ನು ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಆಚರಣೆ ಮಾಡಲಾಗುತ್ತೆ.
 
ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಯೋಜನೆ ಚಾಲನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.ಅಲ್ಲಿಯ ಕಾರ್ಯಕ್ರಮವನ್ನು,ಮೈಸೂರಿನ ಕಾರ್ಯಕ್ರಮವನ್ನು ನೇರವಾಗಿ ನೋಡಲು ವ್ಯವಸ್ಥೆ ಮಾಡಲಾಗಿದೆ.ಸುಮಾರು10 ಸಾವಿರ ಸ್ಥಳಗಳಿಂದ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.ಈ ಹಿನ್ನಲೆ ಎಲ್ಲಾ ಕಾರ್ಯಕ್ರಮಗಳನ್ನು ನೇರವಾಗಿ ಮೈಸೂರಿನಲ್ಲಿಯೇ ನೋಡಲು ಜೂಮ್ ಮುಖಾಂತರ ಅವಕಾಶ ಮಾಡಿಕೊಡಲಾಗುತ್ತದೆ.ಕಳೆದ 15 ದಿನಗಳಿಂದ ಮೈಸೂರು ಭಾಗದಲ್ಲಿಯೇರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಡಿಸಿಎಂ ಡಿಕೆಶಿವಕುಮಾರ್  ಗೃಹಲಕ್ಷ್ಮೀ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದು,ಕಾರ್ಯಕ್ರಮಕ್ಕೆ ಬರುವ ಅಥಿತಿಗಳಿಗೆ ಉಡುಗೊರೆ ಕೊಡಲು ತಯಾರು ಮಾಡಿಕೊಂಡಿದ್ದಾರೆ.ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜೊತೆ ಯೋಜನೆ ಜಾರಿ ಬಗ್ಗೆ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments