Webdunia - Bharat's app for daily news and videos

Install App

ಜನತೆಗೆ ಸಂತಸದ ಸುದ್ದಿ: ಇನ್ನು ಮುಂದೆ ಪಡಿತರ ಅಂಗಡಿಗಳಲ್ಲೂ ಆ ಸೇವೆಗಳು

Webdunia
ಸೋಮವಾರ, 21 ಫೆಬ್ರವರಿ 2022 (18:08 IST)
ದೇಶದಲ್ಲಿ ಪಡಿತರ ಸಾಮಗ್ರಿಗಳನ್ನು ಒದಗಿಸುವ ರೇಷನ್ ಅಂಗಡಿಗಳು ಇನ್ನು ಮುಂದೆ ಹಣಕಾಸು ಸೇವೆಗಳನ್ನು ನೀಡಲಿವೆ. ಬ್ಯುಸಿನೆಸ್ ಕರೆಸ್ಪಾಂಡಿಂಗ್ ಮಾದರಿಯಲ್ಲಿ ಕಾರ್ಯನಿರ್ವಹಿಸುವರು. ಇವು ಮುದ್ರಾ ಲೋನ್ ನೀಡಲು ಸಹಾಯ ಮಾಡುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಸಂಪರ್ಕವನ್ನು ಹೆಚ್ಚಿಸಲು, ಆರ್ಥಿಕ ಸೇರ್ಪಡೆಗಾಗಿ ಪಡಿತರ ವ್ಯಾಪಾರಿಗಳಿಗೆ ಈ ಸೇವೆಗಳನ್ನು ಒದಗಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಇದು FPS ಸ್ಟೋರ್‌ಗಳಿಗೆ ಹಣಕಾಸು ಸೇವೆಗಳನ್ನು ಒದಗಿಸಲು ಮತ್ತು ಹೆಚ್ಚುವರಿ ಆದಾಯವನ್ನು ಗಳಿಸಲು ಅನುವು ಮಾಡಿಕೊಡುತ್ತದೆ.
ಪ್ರಸ್ತುತ 3 ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳು (CSC) ಜನರಿಗೆ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತವೆ. ಆಧಾರ್, ಪ್ಯಾನ್ ಕಾರ್ಡ್ ನೋಂದಣಿಗಳು, ರೈಲು ಟಿಕೆಟ್ ಬುಕಿಂಗ್, ಸಂಗೀತ ಡೌನ್‌ಲೋಡ್‌ಗಳು, ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲನೆ, ಆದಾಯ ತೆರಿಗೆ ಸೇವೆಗಳು ಮತ್ತು ವಿವಿಧ ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಒದಗಿಸುತ್ತವೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (MITE) ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ, ಮುಂದಿನ ಎರಡು ವರ್ಷಗಳಲ್ಲಿ ಸಿಎಸ್‌ಸಿಗಳ ಸಂಖ್ಯೆಯನ್ನು ಆರು ಲಕ್ಷ ಹಳ್ಳಿಗಳಿಗೆ ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಪ್ರಸ್ತುತ 8,000 CSCಗಳು FPS ನೊಂದಿಗೆ ಸಂಯೋಜಿತವಾಗಿದ್ದು,.ಮುಂದಿನ ವರ್ಷದ ವೇಳೆಗೆ ಇನ್ನೂ 10,000 ಕೇಂದ್ರಗಳನ್ನು ಎಫ್‌ಪಿಎಸ್ ಔಟ್‌ಲೆಟ್‌ಗಳೊಂದಿಗೆ ಸಂಪರ್ಕಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದರಿಂದ ದೂರದ ಪ್ರದೇಶಗಳಿಗೂ ಹಣಕಾಸು ಸೇವೆಗಳನ್ನು ತಲುಪಲು ಅನುವು ಮಾಡಿಕೊಡಲಾಗುತ್ತದೆ.
ಮೈಟಿ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗಳ ಇಲಾಖೆ ಎಫ್‌ಪಿಎಸ್‌ಗಳನನ್ನಾಗಿ ಸಿಎಸ್‌ಸಿಗಳಾಗಿ ಪರಿವರ್ತಿಸಲು ತಿಳುವಳಿಕೆ ಒಪ್ಪಂದವನ್ನು ಮಾಡಿಕೊಂಡಿದೆ. ಪ್ರಸ್ತುತ ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನ ಮತ್ತು ತಮಿಳುನಾಡಿನಲ್ಲಿ ಏಕ-ಐಟಂ ಪಡಿತರ ಸರಕುಗಳು ಮತ್ತು ಹಣಕಾಸು ಸೇವೆಗಳನ್ನು ಒದಗಿಸುತ್ತಿವೆ.
ಪ್ರಸ್ತುತ, 5.34 ಲಕ್ಷ ಎಫ್‌ಪಿಎಸ್‌ಗಳು ದೇಶದಲ್ಲಿ 80 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ 60 ರಿಂದ 70 ಮಿಲಿಯನ್ ಟನ್ ಸಬ್ಸಿಡಿ ಆಹಾರ ಧಾನ್ಯಗಳನ್ನು ವಿತರಿಸುತ್ತಿವೆ. ಈ ಔಟ್‌ಲೆಟ್‌ಗಳಿಗೆ ಬರುವ ಹೆಚ್ಚಿನ ಜನರು ಎಫ್‌ಪಿಎಸ್‌ನಿಂದ ಆದಾಯವನ್ನು ಗಳಿಸಬಹುದು ಎಂದು ಸರ್ಕಾರಿ ಮೂಲಗಳು ಹೇಳುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments