Webdunia - Bharat's app for daily news and videos

Install App

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೊರಟವರಿಗೆ ಗುಡ್ ನ್ಯೂಸ್: ಇಲ್ಲಿದೆ ವಿವರ

Krishnaveni K
ಮಂಗಳವಾರ, 5 ನವೆಂಬರ್ 2024 (10:19 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ್ದು, ಅನೇಕ ರೇಷನ್ ಕಾರ್ಡ್ ಗಳು ರದ್ದಾಗಿವೆ. ಇದರ ಬೆನ್ನಲ್ಲೇ ಈಗ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸದ್ಯದಲ್ಲೇ ಅವಕಾಶ ಸಿಗಲಿದೆ.

 
ಬಿಪಿಎಲ್-ಎಪಿಎಲ್ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವವರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?
ಕರ್ನಾಟಕದ ನಿವಾಸಿಗಳು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯ ಕಚೇರಿಗೇ ತೆರಳಬೇಕೆಂದಿಲ್ಲ. ವೆಬ್ ಸೈಟ್ ಮುಖಾಂತರ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ. Ahara.kar.nic.in ಎಂಬ ವೆಬ್ ಸೈಟ್ ನಲ್ಲಿ ಅರ್ಹ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಇ-ಪಡಿತರ ಚೀಟಿ ಪಡೆದುಕೊಳ್ಳಬಹುದು ಮತ್ತು ನಿಮ್ಮ ಪಡಿತರ ಚೀಟಿಯ ಸ್ಥಿತಿ-ಗತಿಯನ್ನು ಪರಿಶೀಲಿಸಬಹುದಾಗಿದೆ.

ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್
ಇಮೇಲ್ ಐಡಿ
ಮೊಬೈಲ್ ಸಂಖ್ಯೆ
ವಿದ್ಯುತ್ ಬಿಲ್
ಪ್ಯಾನ್ ಕಾರ್ಡ್

ಈ ಮೇಲಿನ ದಾಖಲೆಗಳೊಂದಿಗೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ 15 ದಿನಗಳ ನಂತರ ನಿಮ್ಮ ಪಡಿತರ ಚೀಟಿಯನ್ನು ಹಾಜರುಪಡಿಸಲಾಗುತ್ತದೆ. ಇದಕ್ಕೆ 100 ರೂ. ಶುಲ್ಕ ಪಾವತಿಸಿ ಪಡೆಯಬಹುದು. ಪಡಿತರ ಚೀಟಿ ಕುರಿತ ಯಾವುದೇ ಅನುಮಾನಗಳಿಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್ 18004259339 ಅಥವಾ ಸಹಾಯವಾಣಿ 1967 ಎಂಬ ಸಂಖ್ಯೆಗೆ ಕರೆ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments