ಮಹಿಳೆಯರಿಗೆ ಗುಡ್ ನ್ಯೂಸ್

Webdunia
ಗುರುವಾರ, 19 ಆಗಸ್ಟ್ 2021 (09:18 IST)
ಮೈಸೂರು: ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ರಾಜ್ಯ ಸರ್ಕಾರ ಒದಗಿಸಿರುವ ಸಹಾಯಧನ ಮತ್ತು ಬ್ಯಾಂಕುಗಳಿಂದ ಸಾಲವನ್ನು ಒದಗಿಸುವ ದೃಷ್ಠಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿಯನ್ನು 1 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ.50 ರಷ್ಟಕ್ಕೆ ಅದರಂತೆ ವಿಶೇಷ ವರ್ಗ ಮತ್ತು ಸಾಮಾನ್ಯ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿಯನ್ನು 1 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ.30 ರಷ್ಟಕ್ಕೆ ನಿಗದಿಪಡಿಸಲಾಗಿದೆ.
18 ರಿಂದ 55 ವರ್ಷದೊಳಗಿನವರು ಇತ್ತೀಚಿನ 2 ಭಾವಚಿತ್ರದೊಂದಿಗೆ ಆಧಾರ್ ಪ್ರತಿ, ಆದಾಯ ದೃಢೀಕರಣ ಪತ್ರ, ಜಾತಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು. ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ವರ್ಗದ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ.ಗಳಿದ್ದು, ವಿಶೇಷ ವರ್ಗ ಮತ್ತು ಸಾಮಾನ್ಯ ವರ್ಗದ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ರೂ.ಗಳನ್ನು ಮೀರಿರಬಾರದು.
ಅರ್ಜಿಯ ಜೊತೆಗೆ ವಿಧವೆಯರು ಹಾಗೂ ಅಂಗವಿಕಲರು ಅರ್ಜಿಯನ್ನು ಸಲ್ಲಿಸಿದ್ದಲ್ಲಿ ವಿಧವಾ ಪ್ರಮಾಣ ಪತ್ರ ಹಾಗೂ ಅಂಗವಿಕಲ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಸಕ್ತರು ಅರ್ಜಿಯನ್ನು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ಪಡೆದು 2021 ರ ಸೆಪ್ಟೆಂಬರ್ 10 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಮೈಸೂರು ಜಿಲ್ಲೆಯಲ್ಲಿರುವ ಪ್ರತೀ ತಾಲ್ಲೂಕಿಗೆ ಅಥವಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 6 ರಂತೆ ಭೌತಿಕ ಗುರಿ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ದೂ.ಸಂ. 0821-2491962 (ಮೈಸೂರು ನಗರ), 0821-2567940 (ಮೈಸೂರು ಗ್ರಾಮಾಂತರ), 08227-261267 (ತಿ.ನರಸೀಪುರ), 8221297171 (ಬಿಳಿಕರೆÉ), 08221-226168 (ನಂಜನಗೂಡು), 08222-252254 (ಹುಣಸೂರು), 08228-255320 (ಹೆಚ್.ಡಿ.ಕೋಟೆ), 08223-262714 (ಕೃಷ್ಣರಾಜನಗರ)ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲೆಂದರಲ್ಲಿ ಕಸ ಎಸೆದರೆ ಎಚ್ಚರ: ಇನ್ನು ಮುಂದೆ ರಸ್ತೆರಸ್ತೆಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಮುಂದಿನ ಸುದ್ದಿ
Show comments