Webdunia - Bharat's app for daily news and videos

Install App

ಬೆಂಕಿಯ ಕೆನ್ನಾಲಿಗೆಗೆ ಗೋದಾಮಿನ ಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

Webdunia
ಭಾನುವಾರ, 19 ಮಾರ್ಚ್ 2023 (14:21 IST)
ಹತ್ತಾರು ಮಂದಿಗೆ ಕೆಲಸ ಕೊಟ್ಟಿದ್ದ ಕಂಪನಿ. ಪ್ರತಿನಿತ್ಯ ಲಕ್ಷಾಂತರ ರೂಪಾಯಿ ವಹಿವಾಟು ನಡೆಸ್ತಿತ್ತು. ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದ ಸಿಬ್ಬಂದಿ ರಾತ್ರಿ ಊಟಕ್ಕೆ ಅಂತ ಹೊರ ಹೋಗಿ ಬರೋದ್ರಲ್ಲಿ ಅಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಕೆಲವೇ ಗಂಟೆಗಳಲ್ಲಿ ಇಡೀ ಗೋದಾಮನ್ನೆ ನೆಲಸಮ ಮಾಡುವಂತೆ ಮಾಡಿತ್ತು. 
 
ಧಗ ಧಗ ಹೊತ್ತಿ ಉರಿಯುತ್ತಿರೊ ಬೆಂಕಿ. ನೋಡ ನೋಡ್ತಿದ್ದಂತೆ  ಕುಸಿದು ಬಿದ್ದ ಪ್ಯಾಕ್ಟರಿ ಶೆಡ್ ಬೆಂಕಿ ನಂದಿಸಲು  ಹರಸಾಹಸ ಪಡ್ತಿರೋ ಅಗ್ನಿಶಾಮಕ ಸಿಬ್ಬಂದಿ ಈ ದೃಶ್ಯ ಕಂಡು ಬಂದದ್ದು  ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ. ರಾತ್ರಿ ಸಂಭವಿಸಿರೋ ಭಾರಿ ಅಗ್ನಿ ಅವಘಡದಿಂದ ಸೃಷ್ಟಿಯಾಗಿರೋ ಸನ್ನಿವೇಶ.
 
ಬೆಂಕಿ ಅನಾಹುತಕ್ಕೆ ಸಿಲುಕಿ ನೆಲಕಚ್ಚಿರೋ ಈ ಗೋದಾಮು ಗಾಮಿ ಕೇರ್ ಐಜಿನ್ ಕಂಪನಿ ಎಂಬ ಟಿಶ್ಯೂ ಪೇಪರ್ ಮ್ಯಾನುಪ್ಯಾಕ್ಚರ್ ಕಂಪನಿ. ಸುಮಾರು ಐದಾರು ವರ್ಷಗಳಿಂದೆ ತೆರೆದಿದ್ದ ಕಂಪನಿ ನೂನಾರು ಜನಕ್ಕೆ ಕೆಲಸ ಕೊಟ್ಟಿತ್ತು. ಲಕ್ಷಾಂತರ ರೂಪಾಯಿ ವಹಿವಾಟು ನಡೆಸ್ತಿತ್ತು. ಇದರ ಮಧ್ಯೆ ರಾತ್ರಿ 9 ಗಂಟೆ ಸುಮಾರಿಗೆ ಗೋಡನ್ ನಲ್ಲಿ ಕೆಲಸ‌ ಮಾಡ್ತಿದ್ದ ಸಿಬ್ಬಂದಿ ಊಟಕ್ಕೆಂದು ಹೊರ ಹೋಗಿದ್ದ ವೇಳೆ ದಿಢೀರ್ ಅಂತ ಗೋಡನ್ ಒಳಗೆ ಬೆಂಕಿ‌ ಕಾಣಿಸಿಕೊಂಡಿದೆ.‌ಸಣ್ಣ ಪ್ರಮಾಣದಲ್ಲಿ‌ ಕಾಣಿಸಿಕೊಂಡ ಬೆಂಕಿ ಬೆಂಕಿ ಕೆಲವೇ ನಿಮಿಷಗಳಲ್ಲಿ ಇಡೀ ಗೋದಾಮನ್ನ ಆವರಿಸಿತ್ತು.
 
ಕೂಡ್ಲೇ ಅಲ್ಲಿನ ಸಿಬ್ಬಂದಿ ಕಂಪನಿ‌ ಮಾಲೀಕರಿಗೆ ಹಾಗೂ‌ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದ ಸ್ಥಳಕ್ಕೆ 15ಕ್ಕೂ ಹೆಚ್ಚು ವಾಹನಗಳಲ್ಲಿ ಧಾವಿಸಿದ ಅಗ್ನಿ‌ಶಾಮಕ‌ ಸಿಬ್ಬಂದಿ‌ ಬೆಂಕಿ‌ ನಂದಿಸುವ ಕಾರ್ಯಕ್ಕಿಳಿದ್ರು. ಆದ್ರೆ ಗೋದಾಮಿನ ಒಳಗೆ ಪ್ರವೇಶ ಮಾಡಲು ಸಾಧ್ಯವಾಗದ ಹಿನ್ನೆಲೆ ಜೆಸಿಬಿ ಸಹಾಯದಿಂದ ಗೋಡೌನ್ ನ ಗೋಡೆಗಳನ್ನ ತೆರವು ಮಾಡಿ ಕಾರ್ಯಾಚರಣೆ ಆರಂಭಿಸಿದ್ರು. ಹಾಗೇ  ಮುಂಜಾನೆ 8ಗಂಟೆ ವರೆಗೂ ಕಾರ್ಯಾಚರಣೆ ಬಳಿಕ‌ ಬೆಂಕಿ‌ ನಂದಿಸುವಲ್ಲಿ ಅಗ್ನಿಶಾಮಕ‌ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
 
ಇನ್ನು ಘಟನೆಯೂ ಮೇಲ್ನೊಟಕ್ಕೆ ಶಾರ್ಟ್ ಸೆರ್ಕ್ಯೂಟ್ ನಿಂದ ಸಂಭವಿಸಿದೆ ಎಂದು ತಿಳಿದು ಬಂದಿದ್ದು , ಕಚೇರಿ, ತಯಾರಿಕ ಘಟಕದಲ್ಲಿದ್ದ ಕಂಪ್ಯೂಟರ್ಸ್,ಯಂತ್ರೋಪಕರಣಗಳು ,ಕೆಮಿಕಲ್ಸ್, ಕಚ್ಚಾ ವಸ್ತುಗಳು ಸೇರಿದಂತೆ ಕೋಟ್ಯಾಂತರ ರೂಪಾಯಿ‌ ಮೌಲ್ಯದ ಬೆಂಕಿಯಲ್ಲಿ ಬೆಂದು ಬೂದಿಯಾಗಿವೆ. ಇನ್ನು ಘಟನೆಗೆ ಸಂಬಂಧಿಸಿದ ಮಾದನಾಯಕನಹಳ್ಳಿ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ಘಟನೆಗೆ ನಿಖರ ಕಾರಣ ಏನು ಎಂಬುದನ್ನ ಪತ್ತೆಯಚ್ಚಲು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿನಾಯಿಗಳಿಗೆ ಬಿರಿಯಾನಿ ಆಯ್ತು, ಈಗ ಬಿಬಿಎಂಪಿಯಿಂದ ಟ್ರೈನಿಂಗ್ ಭಾಗ್ಯ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮುಂದಿನ ಸುದ್ದಿ
Show comments