Webdunia - Bharat's app for daily news and videos

Install App

ಸರ್ಕಾರೀ ನೌಕರರ ವೇತನಕ್ಕೂ ಗ್ಯಾರಂಟಿಯಿಂದ ಕುತ್ತು

Krishnaveni K
ಶುಕ್ರವಾರ, 5 ಜುಲೈ 2024 (14:50 IST)
ಬೆಂಗಳೂರು: ರಾಜ್ಯ ಸರ್ಕಾರೀ ನೌಕರರ ವೇತನ ಹೆಚ್ಚಳಕ್ಕೂ ಈಗ ಗ್ಯಾರಂಟಿ ಯೋಜನೆ ಕುತ್ತು ತಂದಿದೆ. ಈ ಬಗ್ಗೆ ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನೌಕರರ ವೇತನ ಹೆಚ್ಚಳದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ.

ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುವುದೇ ತಲೆನೋವಾಗಿದೆ. ಗ್ಯಾರಂಟಿ ಯೋಜನೆಗೆ 50-60 ಸಾವಿರ ಕೋಟಿ ಹಣ ಬೇಕಾಗುತ್ತದೆ. ಹೀಗಾಗಿ ಹಲವು ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರೀ ನೌಕರರ ವೇತನ ಹೆಚ್ಚಳದ ಬಗ್ಗೆನಿರೀಕ್ಷೆಗಳಿತ್ತು.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ನೌಕರರ ವೇತನದ ಬಗ್ಗೆ ಚರ್ಚೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸದ್ಯಕ್ಕೆ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಬೇಕಾಗಿರುವುದರಿಂದ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಈ ಬಾರಿ ವೇತನ ಪರಿಷ್ಕರಣೆ ಅಸಾಧ್ಯ ಎಂದು ಹಣಕಾಸು ಇಲಾಖೆ ಶಿಫಾರಸ್ಸು ಮಾಡಿದೆ.

ತೆರಿಗೆ ರೂಪದಲ್ಲಿ ಹೆಚ್ಚು ಹಣ ಸಂಗ್ರಹವಾಗುತ್ತಿಲ್ಲ. ಇತರೆ ಮೂಲಗಳಿಂದ ಹರಿದುಬರುತ್ತಿರುವ ಹಣ ಗ್ಯಾರಂಟಿ ಯೋಜನೆಗಳಿಗೇ ಸಾಕಾಗುತ್ತಿಲ್ಲ. ಹೀಗಾಗಿ ಸದ್ಯಕ್ಕೆ ವೇತನ ಹೆಚ್ಚಳ ಇಲ್ಲ. ಆದರೆ ಭವಿಷ್ಯದಲ್ಲಿ ವೇತನ ಪರಿಷ್ಕರಣೆ ಮಾಡುವುದಾಗಿ ತೀರ್ಮಾನಕ್ಕೆ ಬರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments