ಸರ್ಕಾರದ ಒಂದು ನಿರ್ಧಾರದಿಂದ 1 ನೇ ತರಗತಿ ಸೇರಲಾಗದೇ ಒದ್ದಾಡುತ್ತಿರುವ ಲಕ್ಷಾಂತರ ಮಕ್ಕಳು

Krishnaveni K
ಶನಿವಾರ, 5 ಏಪ್ರಿಲ್ 2025 (10:59 IST)
ಬೆಂಗಳೂರು: ಒಂದನೇ ತರಗತಿಗೆ ಸೇರ್ಪಡೆಯಾಗಲು ಜೂನ್ 1 ಕ್ಕೆ 6 ವರ್ಷ ಕಡ್ಡಾಯವಾಗಿ ಪೂರ್ತಿಯಾಗಿರಬೇಕು ಎಂದು ಸರ್ಕಾರ ಷರತ್ತು ವಿಧಿಸಿದೆ. ಆದರೆ ಸರ್ಕಾರದ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಸರ್ಕಾರವೇನೋ ಮಕ್ಕಳ ಬೆಳವಣಿಗೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರಬಹುದು. ಆದರೆ ಜೂನ್ 1 ಕ್ಕೆ 6 ವರ್ಷ ಪೂರೈಸಿರಬೇಕು ಎನ್ನುವ ನಿಯಮ ಕೆಲವು ಮಕ್ಕಳ ಪಾಲಿಗೆ ಕಂಟಕವಾಗಿದೆ. ಇದೇ ಕಾರಣಕ್ಕೆ ಪೋಷಕರು ಈಗ ನಿಯಮ ಸಡಿಲಿಕೆ ಮಾಡಿ ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಕೆಲವು ಮಕ್ಕಳಿಗೆ ಜೂನ್ 2 ರಂದು ಅಥವಾ ಒಂದು ವಾರದ ಬಳಿಕ 6 ವರ್ಷ ತುಂಬುತ್ತದೆ. ಈ ಮಕ್ಕಳು ಕೇವಲ ಒಂದು ದಿನ ಅಥವಾ ಒಂದು ವಾರದ ಅಂತರದಿಂದಾಗಿ 1 ನೇ ತರಗತಿ ಸೇರಲು 1 ವರ್ಷ ಕಾಯಬೇಕಿದೆ. ಇದರಿಂದಾಗಿ ಈ ಮಕ್ಕಳು ಎಸ್ಎಸ್ಎಲ್ ಸಿ ಮುಗಿಸುವ ಹೊತ್ತಿಗೆ 17 ನೇ ವರ್ಷಕ್ಕೆ ಕಾಲಿಟ್ಟಿರುತ್ತಾರೆ! ಇದುವೇ ಪೋಷಕರ ಚಿಂತೆಗೆ ಕಾರಣವಾಗಿದೆ.

ಯುಕೆಜಿ ಮುಗಿಸಿರುವವರ ಕತೆ ಏನು?
ಈಗಾಗಲೇ ಯುಕೆಜಿ ಮುಗಿಸಿರುವ ವಿದ್ಯಾರ್ಥಿಗಳು ಕೇವಲ ಕೆಲವೇ ದಿನಗಳಿಗೆ ವಯಸ್ಸು ಪೂರ್ತಿಯಾಗುತ್ತಿಲ್ಲ ಎಂಬ ಕಾರಣಕ್ಕೆ 1 ನೇ ತರಗತಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಇಂತಹ ಮಕ್ಕಳ ಕತೆಯೇನು ಎಂಬುದು ಪೋಷಕರ ಪ್ರಶ್ನೆಯಾಗಿದೆ. ಒಂದು ವರ್ಷ ಮಕ್ಕಳನ್ನು ಮನೆಯಲ್ಲೇ ಕೂರಿಸಿದರೆ ಅವರಿಗೆ ಶಾಲೆಯ ಮೇಲೆ ಆಸಕ್ತಿ ಹೋಗಬಹುದು. ಇಲ್ಲವೇ ಒಂದು ರೀತಿಯಲ್ಲಿ ಮಂಕಾಗಬಹುದು.

ಬೆಂಗಳೂರಿನಂತಹ ನಗರಗಳ ಖಾಸಗಿ ಶಾಲೆಗಳಲ್ಲಿ ದುಬಾರಿ ಫೀಸ್ ಕೊಟ್ಟು ಯುಕೆಜಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಈಗ ಮತ್ತೆ ಇನ್ನೊಂದು ವರ್ಷ ದುಬಾರಿ ಫೀಸ್ ಕೊಟ್ಟು ಯುಕೆಜಿಗೆ ಕಳುಹಿಸಲೂ ಅಲ್ಲ, ಒಂದನೇ ತರಗತಿಗೆ ದಾಖಲಾಯಿತೂ ಇಲ್ಲ ಎಂಬ ಪರಿಸ್ಥಿತಿಯಾಗಿದೆ. ಹೀಗಾಗಿ ಕನಿಷ್ಠ 1 ತಿಂಗಳ ಅಂತರವಿದ್ದವರಿಗಾದರೂ ವಿನಾಯ್ತಿ ಕೊಡಿ ಎಂದು ಪೋಷಕರು ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments