Webdunia - Bharat's app for daily news and videos

Install App

ದರ್ಶನ್ ಪ್ರಕರಣ ಮುಚ್ಚಿ ಹಾಕಲೆಂದೇ ಎಸ್ ಪಿಪಿ ಬದಲಾವಣೆ ಮಾಡಲಾಗ್ತಿದೆಯಾ

Krishnaveni K
ಬುಧವಾರ, 19 ಜೂನ್ 2024 (12:07 IST)
ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರನ್ನು ರೇಣುಕಾಸ್ವಾಮಿ ಹತ್ಯೆ ಕೇಸ್ ನಿಂದ ಬಚಾವ್ ಮಾಡಲು ಎಸ್ ಪಿಪಿ ಬದಲಾವಣೆ ಮಾಡಲಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ.

ದರ್ಶನ್ ಗೆ ಆಪ್ತರಾಗಿದ್ದ ಮೂವರು ಪ್ರಭಾವಿ ಸಚಿವರಿಂದಲೇ ಸಿಎಂ ಸಿದ್ದರಾಮಯ್ಯ ಮೇಲೆ ಎಸ್ ಪಿಪಿ ಬದಲಾವಣೆಗೆ ಒತ್ತಡ ಹಾಕಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರ ಇದೀಗ ವಿಶೇಷ ಅಭಿಯೋಜಕರಾಗಿ ಪ್ರಸನ್ನಕುಮಾರ್ ಅವರನ್ನು ನೇಮಿಸಿತ್ತು. ಪ್ರಸನ್ನ ಕುಮಾರ್ ಸಿಬಿಐ, ಇಡಿ ಪ್ರಕರಣಗಳು ಸೇರಿದಂತೆ ಅನೇಕ ಪ್ರಕರಣಗಳನ್ನು ನಿರ್ವಹಿಸಿದ ಅನುಭವಿ ಅಭಿಯೋಜಕರಾಗಿದ್ದಾರೆ.

ಆದರೆ ಅವರು ಅಭಿಯೋಜಕರಾದರೆ ದರ್ಶನ್ ರನ್ನು ಕೇಸ್ ನಿಂದ ಬಚಾವ್ ಮಾಡುವುದು ಎಂಬ ಕಷ್ಟಕ್ಕೆ ಅವರನ್ನು ಬದಲಾಯಿಸಲು ಹುನ್ನಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಗೃಹಸಚಿವ ಜಿ ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸದ್ಯಕ್ಕೆ ಬದಲಾವಣೆ ಬಗ್ಗೆ ನಿರ್ಧರಿಸಿಲ್ಲ. ಒಂದು ವೇಳೆ ಬದಲಾಯಿಸಿದರೂ ತಪ್ಪೇನಿಲ್ಲ ಎಂದಿದ್ದಾರೆ. ಆ ಮೂಲಕ ಇಂತಹದ್ದೊಂದು ಪ್ರಸ್ತಾವನೆ ಇರುವುದು ನಿಜ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಒಂದು ವೇಳೆ ಈ ಹಂತದಲ್ಲಿ ವಿಶೇಷ ಅಭಿಯೋಜಕರನ್ನು ಬದಲಾಯಿಸಿದರೆ ಸರ್ಕಾರ ದರ್ಶನ್ ಪರವಾಗಿ ಒತ್ತಡಕ್ಕೆ ಮಣಿದಿದೆ ಎಂಬ ಸಂದೇಶ ಹೋಗಲಿದೆ. ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ, ಈ ಪ್ರಕರಣದ ಬಗ್ಗೆ ಯಾರೂ ನನ್ನ ಬಳಿ ಬರಬೇಡಿ ಎಂದು ಖಡಕ್ ಆಗಿ ಹೇಳಿದ್ದರು. ಈಗ ವಿಶೇಷ ಅಭಿಯೋಜಕರ ವಿಚಾರದಲ್ಲೂ ಸಿಎಂ ಅದೇ ಕಟ್ಟುನಿಟ್ಟು ಅನುಸರಿಸುತ್ತಾರಾ ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments