Webdunia - Bharat's app for daily news and videos

Install App

ಸರಕಾರ ಕ್ರಮ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಗರಂ

Webdunia
ಮಂಗಳವಾರ, 10 ಜುಲೈ 2018 (16:39 IST)
ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಆರಂಭಿಸುವ ಸರಕಾರದ ಕ್ರಮಕ್ಕೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ. ಅಂಗನವಾಡಿಗಳ ಕಾರ್ಯಕರ್ತೆಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. 

ಸರ್ಕಾರಿ ಶಾಲೆಯಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಪ್ರಾರಂಭಿಸುವ ಸರ್ಕಾರದ ನಡೆಗೆ ಚಾಮರಾಜನಗರದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪಚ್ಚಪ್ಪ ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ 2 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಛೇರಿ ಎದುರು ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ, ತರಗತಿಗಳನ್ನ ಪ್ರಾರಂಭಿಸುತ್ತಿರುವುದು ಹಾಗೂ ಪಾರ್ಸಲ್ ರೂಪದಲ್ಲಿ ಮಕ್ಕಳಿಗೆ ಆಹಾರ ವಿತರಿಸುವ ಸರ್ಕಾರದ ನೀತಿಯನ್ನು ಖಂಡಿಸಿದರು. ಸಂಘದ ಅಧ್ಯಕ್ಷೆ ಸುಜಾತ, ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 50 ರಷ್ಟು ಅನುದಾನ ಕಡಿತ ಮಾಡಿರುವುದರಿಂದ 6 ತಿಂಗಳಾದರೂ ಸಂಬಳವಾಗುತ್ತಿಲ್ಲ, ಮಿನಿ ಅಂಗನವಾಡಿ ಕೇಂದ್ರಗಳಿಗೆ ಮತೃಪೂರ್ಣ ಮಾಡಲು ಸಮಸ್ಯೆಯಾಗಿದೆ ಅವರಿಗೆ ರಿಯಾಯಿತಿ ನೀಡಬೇಕು, ಬಾಲ ವಿಕಾಸ ಸಮಿತಿಯ ಅಧ್ಯಕ್ಷರಿಗೆ ನೀಡಿರುವ ನಕಾರಾತ್ಮಕ ಅಂಶಗಳನ್ನು ಕೈಬಿಡಬೇಕೆಂದು  ಒತ್ತಾಯಿಸಿದರು.

 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments