ಕೊವಿಡ್ ನಿಯಂತ್ರಣದ ಬಗ್ಗೆ ಸರ್ಕಾರ ಕ್ರಮ

Webdunia
ಬುಧವಾರ, 21 ಡಿಸೆಂಬರ್ 2022 (14:51 IST)
ಚೀನಾದಲ್ಲಿ ಮತ್ತೆ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಕೂಡ ಹಲವುಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಣ್ಗಾವಲಿಗೆ ವಿಶೇಷ ಸಮಿತಿ ರಚಿಸಿದ್ದು, ಒಂದಷ್ಟು ವಿಚಾರಗಳ ಕುರಿತು ಇಂದು ಚರ್ಚೆ ನಡೆಯಲಿದೆ. ವಿದೇಶ ಪ್ರಯಾಣಕ್ಕೆ ಸಂಬಂಧಿಸಿದಂತೆ ನಿರ್ಬಂಧ ಘೋಷಿಸುವ ಸಾಧ್ಯತೆ ಇದೆ ಹಾಗೆಯೇ ವಿದೇಶದಿಂದ ಬರುವವರಿಗೆ ಮತ್ತೆ ಒಂದಿಷ್ಟು ಶಿಷ್ಟಾಚಾರಗಳನ್ನು ಘೋಷಿಸುವ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ. ಪರಿಶೀಲನಾ ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ಅಂತಾರಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಒಳಬರುವ ಪ್ರಕರಣಗಳನ್ನು ನಿರ್ಬಂಧಿಸುವ ತಂತ್ರ, ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ಹಾಕುವುದು ಮತ್ತು ಕೋವಿಡ್‌ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ಒಳಗೊಂಡಿರುತ್ತದೆ.ವಿದೇಶದಿಂದ ಹಿಂದಿರುಗುವ ಭಾರತೀಯ ಪ್ರಯಾಣಿಕರು, ಪ್ರಸ್ತುತ ದೇಶದಲ್ಲಿರುವ ಕೋವಿಡ್ ತಳಿಗಳು ಮತ್ತು ಮುಂಬರುವ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸೋಂಕು ಹರಡದಂತೆ ತಡೆಗಟ್ಟುವ ಪ್ರೋಟೋಕಾಲ್‌ಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments