Webdunia - Bharat's app for daily news and videos

Install App

ರೈತರ ಮೇಲೆ ಲಾಠಿ ಬೀಸಿದ ಯಾವ ಸರಕಾರವು ಉಳಿದಿಲ್ಲ: ಶಾಸಕ ಕೋನರೆಡ್ಡಿ

Webdunia
ಮಂಗಳವಾರ, 2 ಆಗಸ್ಟ್ 2016 (19:02 IST)
ಯಮನೂರು ಲಾಠಿ ಚಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ಮೇಲೆ ಲಾಠಿ ಬೀಸಿದ ಯಾವ ಸರಕಾರವು ಉಳಿದಿಲ್ಲ ಎಂದು ನವಲಗುಂದ ಜೆಡಿಎಸ್ ಶಾಸಕ ಎನ್‌.ಎಚ್‌.ಕೋನರೆಡ್ಡಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಮಹದಾಯಿ ಹೋರಾಟದಲ್ಲಿ ಬಂಧನಕ್ಕೊಳಗಾದ ರೈತರನ್ನು ಚಿತ್ರದುರ್ಗ ಕಾರಾಗೃಹದಲ್ಲಿ ಇಡಲಾಗಿದ್ದು, ಇಂದು ಜೆಡಿಎಸ್ ಶಾಸಕ ಕೋನರೆಡ್ಡಿ ರೈತರನ್ನು ಭೇಟಿಯಾಗಿ ಜಾಮೀನಿನ ಮೇಲೆ ಅವರನ್ನು ಬಿಡುಗಡೆಗೊಳಿಸಲು ಪ್ರಯತ್ನಿಸಿದರು.
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ ರೈತರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆದ ಲಾಠಿ ಚಾರ್ಚ್‌ ಅಮಾನವೀಯವಾದದ್ದು, ರೈತರ ಮೇಲೆ ಲಾಠಿ ಬೀಸಿದ ಯಾವ ಸರಕಾರವು ಉಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ನನ್ನ ಕ್ಷೇತ್ರದಲ್ಲಿ ರೈತರ ಮೇಲೆ ದೌರ್ಜನ್ಯ ನಡೆದಿರುವುದು ನನಗೆ ಮಾಹಿತಿ ಇರಲಿಲ್ಲ. ಪೊಲೀಸರಿಗೆ ಲಾಠಿ ಚಾರ್ಚ್ ನಡೆಸಲು ಅನುಮತಿ ನೀಡಿದವರು ಯಾರು ಎಂದು ಪ್ರಶ್ನಿಸಿದರು.
 
ಘಟನೆ ನಡೆದ ಸ್ಥಳಕ್ಕೆ ಯಾವ ಸಚಿವರು ಸೌಜನ್ಯಕ್ಕಾಗಿಯೂ ಭೇಟಿ ನೀಡಿಲ್ಲ. ಮಹದಾಯಿ ಹೋರಾಟದಲ್ಲಿ ಪಕ್ಷಭೇದ ಮರೆತು ಚರ್ಚೆ ನಡೆಸಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರು ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಸಮಸ್ಯಯನ್ನು ಇತ್ಯರ್ಥಗೊಳಿಸಬೇಕು ಎಂದು ಜೆಡಿಎಸ್ ಶಾಸಕ ಎನ್‌.ಎಚ್‌.ಕೋನರೆಡ್ಡಿ ಮನವಿ ಮಾಡಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments