Select Your Language

Notifications

webdunia
webdunia
webdunia
webdunia

ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಸಾಧ್ಯವೇ ಇಲ್ಲ- ಬಿ.ಎಸ್ ಯಡಿಯೂರಪ್ಪ

ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಸಾಧ್ಯವೇ ಇಲ್ಲ- ಬಿ.ಎಸ್ ಯಡಿಯೂರಪ್ಪ
ಬೆಂಗಳೂರು , ಶುಕ್ರವಾರ, 12 ಜುಲೈ 2019 (10:14 IST)
ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿಯವರ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಲಿದೆಯಾ?  ಎಂಬ ಅನುಮಾನ ಎಲ್ಲೇಡೆ ವ್ಯಕ್ತವಾಗುತ್ತಿದೆ.




ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು, ಸಾ.ರಾ ಮಹೇಶ್ ಹಾಗೂ ಬಿಜೆಪಿ ಮುಖಂಡ ಭೇಟಿಗೆ ಹೊಸ ಅರ್ಥ ನೀಡುವುದು ಬೇಡ. ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಆಗುತ್ತೇನ್ರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ.


ಅಲ್ಲದೆ ಈ ಹಿಂದೆ ನೂರು ಬಾರಿ ನಾವು ಜೆಡಿಎಸ್ ಜೊತೆ ಸರ್ಕಾರ ಮಾಡಿ ಸೋತು ಹೋಗಿದ್ದೇವೆ ಎಂದು ಹೇಳಿದ್ದೇವೆ. ಇನ್ನು ಸಾಧ್ಯವಿಲ್ಲ. ಅವರಿಬ್ಬರ ಭೇಟಿ ಆಕಸ್ಮಿಕ ಅಷ್ಟೇ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇವರ ಆಶೀರ್ವಾದ ಇರುವವರೆಗೆ ಕುಮಾರಸ್ವಾಮಿ ಸಿಎಂ ಆಗಿರ್ತಾರಂತೆ