Webdunia - Bharat's app for daily news and videos

Install App

ಅಕ್ಕಿಯ ಬದಲು ಖಾತೆಗೆ ಹಣ ಹಾಕಲು ಸರ್ಕಾರ ನಿರ್ಧಾರ : ಮುನಿಯಪ್ಪ

Webdunia
ಗುರುವಾರ, 29 ಜೂನ್ 2023 (06:53 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ 5 ಕೆ.ಜಿ ಅಕ್ಕಿ ಕೊಟ್ಟು ಉಳಿದ 5 ಕೆ.ಜಿ ಅಕ್ಕಿಯ ಬದಲು ಅದರ ಹಣವನ್ನು ನೀಡುವುದಾಗಿ ಸರ್ಕಾರ ನಿರ್ಧಾರ ಮಾಡಿದೆ.

ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಬಳಿಕ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಹಾಗೂ ಹೆಚ್.ಕೆ ಪಾಟೀಲ್, ಅನ್ನಭಾಗ್ಯ ಯೋಜನೆ ಅಕ್ಕಿ ಹೊಂದಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾಪ ತಿರಸ್ಕಾರ ಹಾಗೂ ಇತರೆ ರಾಜ್ಯಗಳಿಂದ ಅಕ್ಕಿ ಕೊಳ್ಳುವ ಮುಂದಿನ ನಡೆ ಬಗ್ಗೆ ಸಹ ಚರ್ಚೆ ನಡೆಸಲಾಯಿತು ಎಂದರು.

ಬಳಿಕ 10 ಕೆ.ಜಿ ಅಕ್ಕಿ ಬದಲಿಗೆ 8 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ/ಗೋಧಿ ಅಥವಾ ಜೋಳ ಕೊಡುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಈ ವೇಳೆ 5 ಕೆ.ಜಿ ಅಕ್ಕಿ ಕೊಟ್ಟು ಇನ್ನೂ 5 ಕೆ.ಜಿ ಅಕ್ಕಿಗೆ ಹಣ ಕೊಡುವುದರ ಬಗ್ಗೆ ನಿರ್ಧಾರ ಮಾಡಲಾಯಿತು ಎಂದು ಹೇಳಿದರು. 

ಕೇಂದ್ರ ಸಚಿವರಿಗೆ ಮನವಿ ಮಾಡಿ ಒತ್ತಾಯ ಮಾಡಿದ್ದೆವು. 15 ಲಕ್ಷ ಟನ್ ಅನ್ನು ಓಪನ್ ಟೆಂಡರ್ ಕರೆದು ಕೇಂದ್ರದವರು ಕೊಟ್ಟಿದ್ದಾರೆ. ಆದ್ರೆ ನಮಗೆ ಅಕ್ಕಿ ಕೊಡಲು ನಿರಾಕರಣೆ, ರಾಜಕೀಯ ಮಾಡಿದ್ರು. ಎಫ್ ಸಿಐ 34 ರೂ. ದರ ಫಿಕ್ಸ್ ಮಾಡಿದ್ದಾರೆ. ಎಫ್ ಸಿಐ ರೇಟ್ ಗೆ ಬೇರೆ ಸಂಸ್ಥೆಗಳು ಅಕ್ಕಿ ಕೊಡಲು ಮುಂದೆ ಬರಲಿಲ್ಲ. ಅಕ್ಕಿ ದಾಸ್ತಾನು ತಯಾರಾಗುವ ತನಕ ಕೆಜಿಗೆ 34 ರೂ. ಹಣವನ್ನ ಕೊಡುತ್ತೇವೆ ಎಂದು ಕೆ.ಹೆಚ್ ಮುನಿಯಪ್ಪ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments