Webdunia - Bharat's app for daily news and videos

Install App

ನನ್ನಿಂದ ಸರ್ಕಾರಕ್ಕೆ ಒಂದು ನಯಾಪೈಸೆ ನಷ್ಟವಾಗಿಲ್ಲ: ಶೆಟ್ಟರ್ ಸ್ಪಷ್ಟನೆ

Webdunia
ಸೋಮವಾರ, 15 ಸೆಪ್ಟಂಬರ್ 2014 (15:23 IST)
ಶೆಟ್ಟರ್ ಸಿಎಂ ಆಗಿದ್ದಾಗ ಕಾನೂನು ಉಲ್ಲಂಘಿಸಿ ಮುರುಘಾಮಠಕ್ಕೆ 29.19 ಕೋಟಿ ಡಿಡಿಯನ್ನು ಸರ್ಕಾರ ಪಾವತಿಸಿದ ಸಂಗತಿ ಬೆಳಕಿಗೆ ಬಂದಿದೆ ಎಂದು ಸಾಮಾಜಿಕ ಕಾರ್ಯಕರ್ತ  ಟಿ.ಜೆ. ಅಬ್ರಹಾಂ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.  ಕಾನೂನು ಇಲಾಖೆ ಖರೀದಿ ಸೂಕ್ತವಲ್ಲ ಎಂದು ವರದಿ ಮಾಡಿದ್ದರೂ ಸರ್ಕಾರ ಮುರುಘಾಮಠದ ಭೂಮಿ ಖರೀದಿಗೆ ಅನುಮತಿ ನೀಡಿದೆ.  ಇದರಿಂದ ಸರ್ಕಾರಕ್ಕೆ 63 ಕೋಟಿ ರೂ ನಷ್ಟವಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಮಠದ ಸಾಲ ತೀರಿಸಿ ಸರ್ಕಾರ ಸ್ವಾಮೀಜಿಗೆ ಹಣವನ್ನು ನೀಡಿದೆ.

34.36 ಕೋಟಿ ಸಾಲವನ್ನು ಮುರುಘಾಮಠ ಯೂನಿಯನ್ ಬ್ಯಾಂಕ್‌ನಿಂದ ಪಡೆದಿತ್ತು. ಮುರುಘಾಮಠ ಪಡೆದಿದ್ದ ಸಾಲ ತೀರಿಸಲು ಸರ್ಕಾರ 34 ಕೋಟಿ ರಿಲೀಸ್ ಮಾಡಿತು ಎಂದು ಅಬ್ರಾಹಂ ಆರೋಪಿಸಿದ್ದಾರೆ. ಈ ಕುರಿತು ಸ್ವತಃ ಜಗದೀಶ್ ಶೆಟ್ಟರ್ ಅವರ ಪ್ರತಿಕ್ರಿಯೆಯನ್ನು ಕೇಳಿದಾಗ.  ಅರ್ಕಾವತಿ ಡಿನೋಟಿಫಿಕೇಶನ್ ವಿಷಯ ಎತ್ತಿದ ಬಳಿಕ ಬ್ಲಾಕ್‌ಮೇಲ್ ಮಾಡುವುದಕ್ಕೆ ಒಂದೊಂದೇ ವಿಷಯವನ್ನು ಸಿಎಂ ಎತ್ತುತ್ತಿದ್ದಾರೆ.

ಮುರುಘಾಮಠದ ಭೂಮಿಯನ್ನು ಕಾನೂನುಬದ್ಧವಾಗಿ ಖರೀದಿ ಮಾಡಲಾಗಿದೆ. ಕೆಐಎಡಿಬಿ ತಮಗೆ ಭೂಮಿ ಬೇಕೆಂದು ಹೇಳಿದ್ದರಿಂದ ಕೆಐಎಡಿಬಿಗೆ ಖರೀದಿ ಮಾಡಲಾಗಿದೆ. ಇದರಲ್ಲಿ ಕಾನೂನುಬಾಹಿರ ಯಾವುದೂ ಇಲ್ಲ ಎಂದು ಶೆಟ್ಟರ್ ಹೇಳಿದ್ದಾರೆ. ಸಂಪುಟ ಸಭೆಯಲ್ಲಿ ನಿರ್ಧರಿಸಿ ಆಸ್ತಿ ಖರೀದಿಸಲಾಗಿದೆ ಎಂದು ಹೇಳಿದರು. ಅಬ್ರಹಾಂ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನನ್ನಿಂದ ಸರ್ಕಾರಕ್ಕೆ ಒಂದು ನಯಾಪೈಸೆ ನಷ್ಟವಾಗಿಲ್ಲ ಎಂದು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments