Publish Date: Mon, 28 Mar 2022 (17:10 IST)
Updated Date: Mon, 28 Mar 2022 (17:13 IST)
ಸರ್ಕಾರಿ ನೌಕರರ ಮೇಲಿನ ದುರ್ನಡತೆ ಆರೋಪದ ಸಂಬಂಧ ಇಲಾಖಾ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಶಿಸ್ತುಕ್ರಮ ಆರಂಭಿಸಿ ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಲಾಖಾ ವಿಚಾರಣೆ ಅದಾಲತ್ ನಡೆಸು ವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ನೌಕರರ ಮೇಲಿನ ಇಲಾಖಾ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಸರ್ಕಾರಿ ಕೆಲಸಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಒಂದು ದಿನ ಇಲಾಖಾ ವಿಚಾರಣೆ ಅದಾಲತ್ ನಡೆಸುವಂತೆ ಆದೇಶಿಸಿದ್ದು, ಹಲವು ಸೂಚನೆಗಳ ನಂತರವೂ ವಿಚಾರಣೆಗೆ ಹಾಜರಾಗದ ನೌಕರನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.