Webdunia - Bharat's app for daily news and videos

Install App

ರೌಡಿಶೀಟರ್ ನಾಗರಾಜ್, ಮಕ್ಕಳಿಗೆ ಹೈಕೋರ್ಟ್`ನಿಂದ ಜಾಮೀನು

Webdunia
ಗುರುವಾರ, 21 ಸೆಪ್ಟಂಬರ್ 2017 (14:06 IST)
ಪೊಲೀಸ್ ದಾಳಿ ವೇಳೆ ಮನೆಯಲ್ಲಿ ಕೋಟಿ ಕೋಟಿ ನಿಷೇಧಿತ ನೋಟು ಪತ್ತೆಯಾಗಿ ಬಂಧನಕ್ಕೀಡಾಗಿದ್ದ ರೌಡಿ ಶೀಟರ್ ನಾಗರಾಜ್ ಮತ್ತು ಮಕ್ಕಳಾದ ಶಾಸ್ತ್ರೀ, ಗಾಂಧಿಗೆ ಜಾಮೀನು ಮಂಜೂರಾಗಿದೆ.

7 ಪ್ರಕರಣಗಳಲ್ಲಿ 2 ಲಕ್ಷ ರೂ. ಬಾಂಡ್ ಪಡೆದು ಹೈಕೋರ್ಟ್ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರತೀ ಗುರುವಾರ ಮೂವರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು, ಸಾಕ್ಷಿ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತು ವಿಧಿಸಲಾಗಿದೆ. ಈಗಾಗಲೇ ವಿಚಾರಣೆ ಮುಗಿದಿರುವುದರ ಜೊತೆಗೆ ಇಂತಹದ್ದೇ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿರುವ ಬಗ್ಗೆ ವಕೀಲರು ಕೋರ್ಟ್ ಮುಂದೆ ವಾದಿಸಿದ್ದಾರೆ. ಅಲ್ಲದೆ, ಐಟಿ ಇಲಾಖೆ ದಾಖಲಿಸಬೇಕಿದ್ದ ಪ್ರಕರಣಗಳನ್ನ ಪೊಲೀಸರು ದಾಖಲಿಸಿರುವುದು ಸರಿಯಲ್ಲ ಎಂದು ವಕೀಲರು ವಾದಿಸಿದ್ದು ಜಾಮೀನು ನೀಡಲು ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.

ಏಪ್ರಿಲ್ 14ರಂದು ನಾಗರಾಜ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ 500, 1000 ಮುಖಬೆಲೆಯ ನಿಷೇದಿತ ನೋಟುಗಳು ಪತ್ತೆಯಾಗಿದ್ದವು. ಅಂದು ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದ ನಾಗನನ್ನ 27 ದಿನಗಳ ಬಳಿಕ ತಮಿಳುನಾಡಿನ ಅರ್ಕಾಟ್`ನಲ್ಲಿ ಬಂಧಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

RSS ಗೀತೆ ಪಠಿಸಿದ ಡಿಕೆ ಶಿವಕುಮಾರ್, ಇದೆಲ್ಲ ಅವರೇ ನೋಡಿಕೊಳ್ಳುತ್ತಾರೆಂದ ಪರಮೇಶ್ವರ್‌

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಮುಂದಿನ ಸುದ್ದಿ
Show comments