Webdunia - Bharat's app for daily news and videos

Install App

ರೌಡಿಶೀಟರ್ ನಾಗರಾಜ್, ಮಕ್ಕಳಿಗೆ ಹೈಕೋರ್ಟ್`ನಿಂದ ಜಾಮೀನು

Webdunia
ಗುರುವಾರ, 21 ಸೆಪ್ಟಂಬರ್ 2017 (14:06 IST)
ಪೊಲೀಸ್ ದಾಳಿ ವೇಳೆ ಮನೆಯಲ್ಲಿ ಕೋಟಿ ಕೋಟಿ ನಿಷೇಧಿತ ನೋಟು ಪತ್ತೆಯಾಗಿ ಬಂಧನಕ್ಕೀಡಾಗಿದ್ದ ರೌಡಿ ಶೀಟರ್ ನಾಗರಾಜ್ ಮತ್ತು ಮಕ್ಕಳಾದ ಶಾಸ್ತ್ರೀ, ಗಾಂಧಿಗೆ ಜಾಮೀನು ಮಂಜೂರಾಗಿದೆ.

7 ಪ್ರಕರಣಗಳಲ್ಲಿ 2 ಲಕ್ಷ ರೂ. ಬಾಂಡ್ ಪಡೆದು ಹೈಕೋರ್ಟ್ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರತೀ ಗುರುವಾರ ಮೂವರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು, ಸಾಕ್ಷಿ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತು ವಿಧಿಸಲಾಗಿದೆ. ಈಗಾಗಲೇ ವಿಚಾರಣೆ ಮುಗಿದಿರುವುದರ ಜೊತೆಗೆ ಇಂತಹದ್ದೇ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿರುವ ಬಗ್ಗೆ ವಕೀಲರು ಕೋರ್ಟ್ ಮುಂದೆ ವಾದಿಸಿದ್ದಾರೆ. ಅಲ್ಲದೆ, ಐಟಿ ಇಲಾಖೆ ದಾಖಲಿಸಬೇಕಿದ್ದ ಪ್ರಕರಣಗಳನ್ನ ಪೊಲೀಸರು ದಾಖಲಿಸಿರುವುದು ಸರಿಯಲ್ಲ ಎಂದು ವಕೀಲರು ವಾದಿಸಿದ್ದು ಜಾಮೀನು ನೀಡಲು ಪ್ರಮುಖ ಕಾರಣ ಎಂದು ತಿಳಿದು ಬಂದಿದೆ.

ಏಪ್ರಿಲ್ 14ರಂದು ನಾಗರಾಜ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ 500, 1000 ಮುಖಬೆಲೆಯ ನಿಷೇದಿತ ನೋಟುಗಳು ಪತ್ತೆಯಾಗಿದ್ದವು. ಅಂದು ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದ ನಾಗನನ್ನ 27 ದಿನಗಳ ಬಳಿಕ ತಮಿಳುನಾಡಿನ ಅರ್ಕಾಟ್`ನಲ್ಲಿ ಬಂಧಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments