Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ

Sampriya
ಗುರುವಾರ, 25 ಜುಲೈ 2024 (18:00 IST)
ಮಂಗಳೂರು:  ಕಳೆದ ಕೆಲ ವರ್ಷಗಳಿಂದ ಗೌರವಧನ ಹೆಚ್ಚಳಕ್ಕೆ ಹೋರಾಟ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೊನೆಗೂ ಸರ್ಕಾರದಿಂದ ಸ್ಪಂದನೆ ಸಿಕ್ಕಿದೆ.

ಇದೀಗ ಗೌರವ ಧನ ಹೆಚ್ಚಳಕ್ಕೆ ಸರಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ಶೀಘ್ರವೇ ಗೌರವಧನ ಹೆಚ್ಚಳ ಮಾಡಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ.

ಇಂದು ಪ್ರಶ್ನೋತ್ತರ ಕಲಾಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ವಿಚಾರವಾಗಿ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಂಗನವಾಡಿ ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಸರ್ಕಾರದ ಮುಂದೆ ಈ ಪ್ರಸ್ತಾವನೆ ಇದ್ದು ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

2017 ರಲ್ಲಿ ಸಿದ್ದರಾಮಯ್ಯ ಸರಕಾರ ವಿದ್ದಾಗ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಗೌರವ ಧನ ಹೆಚ್ಚಳ ಮಾಡಿದ್ದರು. ಇದಾದ ಬಳಿಕ ಗೌರವ ಧನ ಹೆಚ್ಚಾಗಿಲ್ಲ. ಇದೀಗ ಮತ್ತೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments