Webdunia - Bharat's app for daily news and videos

Install App

ಎಸ್‌ಎಂ ಕೃಷ್ಣ ನಿಧನಕ್ಕೆ ನಾಳೆ ಸರ್ಕಾರಿ ರಜೆ, ಮೂರು ದಿನ ಶೋಕಾಚರಣೆ

Sampriya
ಮಂಗಳವಾರ, 10 ಡಿಸೆಂಬರ್ 2024 (11:01 IST)
Photo Courtesy X
ಬೆಂಗಳೂರು: ಕರ್ನಾಟಕದ ಧೀಮಂತ ರಾಜಕಾರಣಿ, ಮಾಜಿ ಸಿಎಂ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ಅವರು ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆಗೆ ಘೋಷಣೆ ಮಾಡಿದೆ. ನಾಳೆ ರಾಜ್ಯಾದಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

ನಾಳೆ ಖಾಸಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ.  ಖಾಸಗಿ ಶಾಲೆಗಳ ಒಕ್ಕೂಟ  ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮುಂದಿನ ಸುದ್ದಿ
Show comments