Publish Date: Mon, 16 Oct 2023 (17:25 IST)
Updated Date: Mon, 16 Oct 2023 (18:59 IST)
ಮಳೆ ಇಲ್ಲದೆ ರಾಜ್ಯದಲ್ಲಿ ಭೀಕರ ಬರ ಆವರಿಸಿ ರೈತರು, ಸಾಮಾನ್ಯ ಜನ ಬದುಕು ಸಾಗಿಸುವುದೇ ದುಸ್ಥರವಾಗಿ ಉಸಿರುಗಟ್ಟುವ ವಾತಾವರಣ ನಿರ್ಮಾಣಗೊಂಡಿದೆ. ರಾಜ್ಯ ಸರ್ಕಾರ ಬರ ಪರಿಹಾರದ ಯೋಜನೆಗಳನ್ನು ರೂಪಿಸದೆ ಆಡಳಿತ ಕೈಚೆಲ್ಲಿ ಕುಳಿತಿದೆ ಬರದಿಂದ ರೈತರ ಬೆಳೆಗಳು ನಷ್ಟಕ್ಕೀಡಾಗಿವೆ. ರೈತರಿಗೆ ಪರಿಹಾರ ನೀಡುತ್ತಿಲ್ಲ ರಾಜ್ಯ ಸರ್ಕಾರ ಈ ಕೂಡಲೇ ರೈತರ ಪರವಾಗಿ ನಿಲ್ಲಬೇಕೆಂದು ಎಂದು ರಾಯಚೂರಿನಲ್ಲಿ ಮಾಜಿ ಮುಖ್ಯಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.