Select Your Language

Notifications

webdunia
webdunia
webdunia
webdunia

ಸರ್ಕಾರ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಗಂಭೀರವಾಗಿ ಪರಿಗಣಿಸಲಿ: ಶ್ರೀನಿವಾಸ್ ಪ್ರಸಾದ್

ಸರ್ಕಾರ
ಮೈಸೂರು , ಶುಕ್ರವಾರ, 8 ಜುಲೈ 2016 (19:08 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆಗ್ರಹಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್ ಆಧಾರದ ಮೇಲೆ ಸರಕಾರ ತನಿಖೆ ಕೈಗೊಳ್ಳಬೇಕು. ಡಿವೈಎಸ್‌ಪಿ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆಗಳು ಬಹಿರಂಗವಾಗಬೇಕು. ಇಂತಹ ಪ್ರಕರಣಗಳಲ್ಲಿ ಇತರೆ ಅಧಿಕಾರಿಗಳು ಹತಾಶರಾಗಬಾರದು ಎಂದು ಹೇಳಿದ್ದಾರೆ.
 
ಸರಕಾರಿ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುವುದೇ ಪರಿಹಾರವಲ್ಲ. ಆತ್ಮಹತ್ಯೆ ಕೆಲವು ಸೆಕೆಂಡ್‌ಗಳ ನಿರ್ಧಾರವಷ್ಟೆ. ಅಧಿಕಾರಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.
 
ಸರಕಾರಿ ಅಧಿಕಾರಿಗಳಿಗೆ ಸಮಸ್ಯೆ ಉಂಟಾದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಹಿರಿಯ ಅಧಿಕಾರಿಗಳಿಂದ ಪರಿಹಾರ ಲಭ್ಯವಾಗದಿದ್ದರೆ, ಜನ ಪ್ರತಿನಿಧಿಗಳ ಗಮನಕ್ಕೆ ತರಬೇಕು. ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಸಮಾಜಕ್ಕೆ ನಷ್ಟ ತಂದಿದೆ ಎಂದು ಹೇಳಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿ ಎಂದು ಕೇಳಿದ್ದೆ. ಅವರ ಆತ್ಮಹತ್ಯೆಯಿಂದ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಗುವನ್ನು ಕೊಂದು ರೈಲು ಹಳಿಯಲ್ಲಿ ಎಸೆದ ತಂದೆ