Select Your Language

Notifications

webdunia
webdunia
webdunia
webdunia

ಸರಕಾರದಿಂದ ಅಡಳಿತಯಂತ್ರ ದುರುಪಯೋಗವಾಗಿಲ್ಲ: ಜಿ.ಪರಮೇಶ್ವರ್

ಸರಕಾರದಿಂದ ಅಡಳಿತಯಂತ್ರ ದುರುಪಯೋಗವಾಗಿಲ್ಲ: ಜಿ.ಪರಮೇಶ್ವರ್
ಬೆಂಗಳೂರು , ಸೋಮವಾರ, 3 ಏಪ್ರಿಲ್ 2017 (14:11 IST)
ಉಪಚುನಾವಣೆಯಲ್ಲಿ ಸರಕಾರ ಅಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎನ್ನುವ ವಿಪಕ್ಷಗಳ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಯಾವತ್ತೂ ಇಂತಹ ಹೀನ ಕೃತ್ಯಗಳಿಗೆ ಕೈಹಾಕುವುದಿಲ್ಲ. ಪ್ರತಿಯೊಂದು ಇಲಾಖೆ ಚುನಾವಣೆ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದೆ. ಇದರಲ್ಲಿ ಸರಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಮಾಜಿ ಸಿಎಂ ಎಸ್.ಎಂ, ಕೃಷ್ಣ ಚುನಾವಣೆ ಪ್ರಚಾರದಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಕಾಂಗ್ರೆಸ್ ಸರಕಾರ ಅಡಳಿತಯಂತ್ರವನ್ನು ದುರುಪಯೋಗಪಡಿಸಿಕೊಂಡು ವಿಪಕ್ಷಗಳನ್ನು ಹಣಿಯುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದರು. ಇದೀಗ ಬಿಜೆಪಿ ನಾಯಕರ ಆರೋಪಗಳಿಗೆ ಗೃಹ ಸಚಿವ ಪರಮೇಶ್ವರ್ ಪ್ರತ್ಯುತ್ತರ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪಕ್ಷ ಎಲ್ಲಿದೆ, ಅದು ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ: ಕೃಷ್ಣ