Webdunia - Bharat's app for daily news and videos

Install App

ಕನ್ನಡ ಕಡ್ಡಾಯ ನೀತಿಯನ್ನು ಸಮರ್ಥಿಸಿಕೊಂಡ ಕರ್ನಾಟಕ ಸರ್ಕಾರ

Webdunia
ಸೋಮವಾರ, 15 ನವೆಂಬರ್ 2021 (20:51 IST)
ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರವಾಗಿ ಕನ್ನಡ ಕಡ್ಡಾಯ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಸಲಾಗಿದೆ.
ಈ ವೇಳೆ, ಕನ್ನಡ ಕಡ್ಡಾಯ ನೀತಿಯನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಕನ್ನಡ ಬರದವರಿಗೆ ಪ್ರತ್ಯೇಕ ಪಠ್ಯಕ್ರಮ ರೂಪಿಸಲಾಗಿದೆ. ಕನಿಷ್ಠ ವ್ಯವಹಾರಿಕ ಕನ್ನಡ ಕಲಿಸಲು ಯತ್ನಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳು ಕನ್ನಡ ಕಡ್ಡಾಯ ಪ್ರಶ್ನಿಸಿಲ್ಲ. ಅರ್ಜಿದಾರರು ವೈಯಕ್ತಿಕ ಹಿತಾಸಕ್ತಿ ಹೊಂದಿದ್ದಾರೆ. ಇತರೆ ಭಾಷೆ ಶಿಕ್ಷಕರ ವೈಯಕ್ತಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಗಣಿಸದಂತೆ ಕೋಟ್೯ ಗೆ  ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದಾರೆ.
ಸರ್ಕಾರದ ನೀತಿ ನಿರೂಪಣೆಯಲ್ಲಿ ಮಧ್ಯಪ್ರವೇಶಿಸುವಂತಿಲ್ಲ. ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ವಿಚಾರದಲ್ಲೂ ಇದೇ ಪ್ರಶ್ನೆ ಇದೆ. ಸುಪ್ರೀಂಕೋರ್ಟ್ ಮಧ್ಯಪ್ರವೇಶ ನಿರಾಕರಿಸಿತ್ತು ಎಂದು ಅವರು ವಾದ ಮಂಡಿಸಿದ್ದಾರೆ.
ಅರ್ಜಿದಾರ ಸಂಸ್ಕೃತ ಭಾರತಿ ಟ್ರಸ್ಟ್ ಪರ ವಕೀಲರು ವಾದ ಮಂಡಿಸಿ, ಸರ್ಕಾರದ ಕ್ರಮ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಷ್ಟ. ಪ್ರತ್ಯೇಕ ಶಿಕ್ಷಕರು, ಗ್ರಂಥಾಲಯ, ‌ಪುಸ್ತಕ ಒದಗಿಸಬೇಕು. ಕನ್ನಡ ಒತ್ತಾಯಪೂರ್ವಕವಾಗಿ ಪ್ರೀತಿಸುವಂತೆ ಮಾಡುತ್ತಿದೆ. ಕರ್ನಾಟಕದಲ್ಲೇ ಬೇರೆ ಮಾಧ್ಯಮದ ವಿದ್ಯಾರ್ಥಿಗಳಿದ್ದಾರೆ. ಆ ವಿದ್ಯಾರ್ಥಿಗಳಿಗೆ ಸರ್ಕಾರದ ನೀತಿಯಿಂದ ತೊಂದರೆ ಆಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾರೆ. ಕ್ರಿಯಾತ್ಮಕ ಕನ್ನಡದ ಪಠ್ಯಕ್ರಮ ಕ್ಲಿಷ್ಟಕರವಾಗಿದೆ. ಭಾಷೆ ಆಯ್ಕೆಯಾಗಿ ಕಲಿಸಬೇಕು, ಕಡ್ಡಾಯಗೊಳಿಸಬಾರದು ಎಂದರು.
ಕನ್ನಡ ಪ್ರೋತ್ಸಾಹದ ಹೆಸರಲ್ಲಿ ಕಡ್ಡಾಯಗೊಳಿಸುವುದು ಸರಿಯೇ ಎಂದು ಹೈಕೋರ್ಟ್ ಕೇಂದ್ರ ಸರ್ಕಾರದ ನಿಲುವು ಕೇಳಿದೆ. ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಕಾಲಾವಕಾಶ ಕೋರಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.











 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments