ಮುಷ್ಕರ ನಡೆಸುತ್ತಿದ್ದ ಸರ್ಕಾರಿ ವೈದ್ಯರ ಜೊತೆ ಮಾತುಕತೆ ಯಶಸ್ವಿಯಾಗಿದ್ದು, ವೈದ್ಯರ 14 ಬೇಡಿಕೆಗಳ ಪೈಕಿ 10 ಬೇಡಿಕೆಗಳಿಗೆ ಸರ್ಕಾರ ಸಮ್ಮತಿಯ ಮುದ್ರೆ ಒತ್ತಿದೆ. ಜಿಲ್ಲಾಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿಗಳ ಪದೋನ್ನತಿಗೆ ನಿರ್ಧರಿಸಲಾಗಿದೆ. ಕೆಪಿಎಸ್ಸಿ ಮೂಲಕ ಮೂಲಕ ವೈದ್ಯರು ಮತ್ತು ನರ್ಸ್ಗಳ ನೇಮಕಾತಿ.
ವೈದ್ಯರ ವರ್ಗಾವಣೆ ನಿಯಮಕ್ಕೆ ತಿದ್ದುಪಡಿ ತರಲು ನಿರ್ಧಾರ, ಪ್ರತಿ ತಿಂಗಳ ಮೊದಲ ವಾರದಲ್ಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗೆ ಸಂಬಳ. ಸ್ಥಾನಿಕ ವೈದ್ಯರುಗಳನ್ನೇ ಸರ್ಜನ್ಗಳಾಗಿ ನೇಮಕ,
ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಔಷಧಿಗಳ ಪೂರೈಕೆಗೆ ಕ್ರಮ, ಮೂರು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ವೈದ್ಯರಿಗೆ ಕಾಯಮಾತಿ ಮುಂತಾದ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಸಮ್ಮತಿಸಿದೆ.