ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರದ ಆದೇಶ

Webdunia
ಶನಿವಾರ, 22 ಡಿಸೆಂಬರ್ 2018 (13:18 IST)
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ತೊಗರಿ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಬೆಲೆ 5675 ರೂ. ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನ 425 ರೂ. ಸೇರಿ ಒಟ್ಟು 6100 ರೂ. ದರದಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ರೈತರಿಂದ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಅದರಂತೆ ಡಿಸೆಂಬರ್ 24 ರಿಂದ ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ಸಂಬಂಧ ವಿವಿಧ ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ತಾಲೂಕಿನ ತಹಶೀಲ್ದಾರರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ  2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯ ಸುಮಾರು 123 ಖರೀದಿ ಕೇಂದ್ರಗಳಲ್ಲಿ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ ಮಿತಿಗೊಳಪಟ್ಟು ತೊಗರಿ ಖರೀದಿಸಲಾಗುವುದು. ಖರೀದಿ ಕೇಂದ್ರದ ಸುತ್ತಳತೆಯ 15.ಕಿಮಿ ವ್ಯಾಪ್ತಿಯ ರೈತರು ಇಲ್ಲಿ ತೊಗರಿಯನ್ನು ತಂದು ಸರ್ಕಾರಕ್ಕೆ ಮಾರಾಟ ಮಾಡಬಹುದಾಗಿದೆ.

ಇತ್ತೀಚೆಗೆ ಮಳೆ ಅಭಾವದಿಂದ ಬರಗಾಲ ಸ್ಥಿತಿ ಜಿಲ್ಲೆಯಲ್ಲಿ ತಲೆದೋರಿದರಿಂದ ಬೆಳೆ ವಿಮೆ ಪರಿಹಾರಕ್ಕಾಗಿ ಜಿಯೋ ಫೆನ್ಸಿಂಗ್ ಸರ್ವೆ ಮಾಡಲಾಗಿದೆ. ಸದರಿ ಸರ್ವೇ ಮೋಬೈಲ್ ಆ್ಯಪ್ ಮೂಲಕ ಮಾಡಿರುವುದರಿಂದ ಯಾವ ರೈತರು ಎಷ್ಟು ಎಕರೆಯಲ್ಲಿ ಯಾವ್ಯಾವ ಬೆಳೆ ಬೆಳೆದಿದ್ದಾರೆ ಎಂಬುದರ ಕುರಿತ ಸಂಪೂರ್ಣ ಮಾಹಿತಿ ಲಭ್ಯವಿರುತ್ತದೆ. ತೊಗರಿ ಖರೀದಿ ಸಂದರ್ಭದಲ್ಲಿ ರೈತರ ನೀಡುವ ಮಾಹಿತಿಯೊಂದಿಗೆ ಈಗಾಗಲೆ ಕಲೆಹಾಕಿರುವ ಡೇಟಾವನ್ನು ಹೊಂದಿಸಿ ರೈತರಿಂದ ತೊಗರಿ ಖರೀದಿಸಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments