Webdunia - Bharat's app for daily news and videos

Install App

ಮೀಸಲಾತಿ ವಿಚಾರದಲ್ಲಿ ಸರ್ಕಾರ ದಿಟ್ಟ ನಿರ್ಧಾರ : ಬೊಮ್ಮಾಯಿ

Webdunia
ಶುಕ್ರವಾರ, 14 ಅಕ್ಟೋಬರ್ 2022 (08:11 IST)
ಬೆಂಗಳೂರು : ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದೆ.

ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ-ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ದಶಕಗಳ ಕಾಲ ಅಧಿಕಾರದಲ್ಲಿತ್ತು. ಯಾಕೆ ಮೀಸಲಾತಿ ವಿಚಾರದಲ್ಲಿ ಇಂಥ ದಿಟ್ಟ ನಿರ್ಧಾರ ಮಾಡಿಲ್ಲ? ಕಾಂಗ್ರೆಸ್ ಪಕ್ಷದವರು ದೀನ ದಲಿತರು ಮತ್ತು ಎಸ್ಸಿ, ಎಸ್ಟಿ ಸಮುದಾಯದವರ ವಿರೋಧಿಗಳು ಎಂದು ಆಕ್ಷೇಪಿಸಿದ್ದಾರೆ. 

ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. ರೈತ ಕೃಷಿ ಕೂಲಿಕಾರರು ಸೇರಿ ಅನೇಕ ಸಮುದಾಯಗಳಿಗೆ ಇದನ್ನು ವಿಸ್ತರಿಸಲಾಗಿದೆ. ಉದ್ಯೋಗ ಹೆಚ್ಚಳಕ್ಕೆ ನಾವು ಆದ್ಯತೆ ಕೊಡುತ್ತಿದ್ದೇವೆ. 5 ಲಕ್ಷ ಮಹಿಳೆಯರಿಗೆ, 5 ಲಕ್ಷ ಯುವಕರಿಗೆ ಕೆಲಸ ಸಿಗುವಂತೆ ಮಾಡುತ್ತಿದ್ದೇವೆ ಎಂದು ವಿವರಿಸಿದ ಅವರು, ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯವು ಕೇವಲ ಭಾಷಣದ ಸರಕಾಗಿತ್ತು ಹಾಗೂ ಮತಬ್ಯಾಂಕ್ ಮಾಡಲು ಇದನ್ನು ಬಳಸಲಾಗುತ್ತಿತ್ತು ಎಂದು ಆಕ್ಷೇಪಿಸಿದರು. ಕನಕದಾಸರ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಅನುದಾನ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments