Select Your Language

Notifications

webdunia
webdunia
webdunia
webdunia

ಸರ್ಕಾರದ ನಿರ್ಧಾರವೇ ಅಂತಿಮ : ಬೊಮ್ಮಾಯಿ

ಸರ್ಕಾರದ ನಿರ್ಧಾರವೇ ಅಂತಿಮ : ಬೊಮ್ಮಾಯಿ
ಬೆಂಗಳೂರು , ಗುರುವಾರ, 11 ಆಗಸ್ಟ್ 2022 (14:03 IST)
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
 
ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಅಂತ ನಿರ್ಧಾರ ಆಗಿದೆ. ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ.

ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಸ್ಪಷ್ಟವಾಗಿ ತಿಳಿಸಿದರು. 

ಶಾಸಕ ಜಮೀರ್ ಅಹ್ಮದ್ರಿಂದ ಗಣೇಶೋತ್ಸವ ಮಾಡಲು ಬಿಡೊಲ್ಲ ಎಂಬ ಹೇಳಿಕೆಗೆ ತಿರುಗೇಟು ಕೊಟ್ಟ ಸಿಎಂ, ಜಮೀರ್ ಹೇಳಿಕೆಗೆ ಬೆಲೆ ಇಲ್ಲ. ಯಾರ್ ಏನೇ ಹೇಳಿದರು ಕಾನೂನು ಪ್ರಕಾರವೇ ಕಾರ್ಯಕ್ರಮಗಳು ನಡೆಯುತ್ತವೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿ ರಜತ ಮಹೋತ್ಸವಕ್ಕೇ ಸಿಲಿಕಾನ್ ಸಿಟಿ ನಾಗರಿಕರಿಗೆ ಭರ್ಜರಿ ಗಿಫ್ಟ್