ಸರ್ಕಾರಿ ಶಾಲೆಯಲ್ಲಿ ಹೆಚ್ಚುತ್ತಿರುವ ದಾಖಲಾತಿ- ಸಚಿವ ಸುರೇಶ್ ಕುಮಾರ್

Webdunia
ಗುರುವಾರ, 8 ಜುಲೈ 2021 (18:33 IST)
ಬೆಂಗಳೂರು: ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. 
 
ಗುರುವಾರ ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನೆಲಗದೇರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ  ಭೇಟಿ ನೀಡಿ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು. 
 
ಅತ್ಯಂತ ಗುಣಮಟ್ಟದ ಶಿಕ್ಷಣ  ನೀಡುವ ನೆಲಗದೇರನಹಳ್ಳಿ ಸರ್ಕಾರಿ ಶಾಲೆಯಲ್ಲಿ ದಾಖಲಾತಿಗಾಗಿ ಹಲವು ಕಡೆಗಳಿಂದ ಬೇಡಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಸಚಿವರು, ಶಾಲಾ ದಾಖಲಾತಿಗಾಗಿ ಸರದಿ ಸಾಲಿನಲ್ಲಿ ನಿಂತಿದ್ದ ಮಕ್ಕಳು ಮತ್ತು ಪೋಷಕರನ್ನು ಮಾತನಾಡಿಸಿದರು. 
 
ಶಾಲೆಯಲ್ಲಿ ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಸದಸ್ಯರು ಮತ್ತು ಶಿಕ್ಷಕರೊಂದಿಗೆ ಚರ್ಚೆ ನಡೆಸಿದರು. 
 
ಮೊದಲೆಲ್ಲಾ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೊಂದಲು ಪ್ರಭಾವ ತರುವುದನ್ನು ಕಾಣುತ್ತಿದ್ದೆವು. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಿರುವುದರಿಂದ ಈಗ ಇಂತಹ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯಲು ಹಲವಾರು ಮಂದಿ ಶಾಸಕರು ಮತ್ತು ಸಚಿವರ ಮೂಲಕ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. 
 
ರಾಜ್ಯದೆಲ್ಲೆಡೆ ದಾಖಲಾತಿ ಪ್ರಕ್ರಿಯೆ ಮುಂದುವರೆದಿದ್ದು, ಚಂದನಾ ದೂರದರ್ಶನ ವಾಹಿನಿಯಲ್ಲಿ  ಸಂವೇದಾ ಪಾಠಗಳು ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿರುವುದು ಕಂಡು ಬರುತ್ತಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. 
 
ಈ ಸಂದರ್ಭದಲ್ಲಿ ದಾಸರಹಳ್ಳಿ ವಿಧಾನಸಭಾ ಸದಸ್ಯ ಮಂಜುನಾಥ್ ಮತ್ತಿತರರು ಹಾಜರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments