ಸರ್ಕಾರಿ ಶಾಲೆಯ ಪ್ರೊಜೆಕ್ಟರ್ ಕಳವು!

Webdunia
ಬುಧವಾರ, 9 ಮಾರ್ಚ್ 2022 (08:27 IST)
ಚಿಕ್ಕಮಗಳೂರು : ಶಾಲೆ, ಕೋಳಿ ಅಂಗಡಿ ಹಾಗೂ ಗ್ಯಾರೇಜ್ ಸೇರಿದಂತೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಅತ್ತಿಗೆರೆ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದೆ.

ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಡೇ ಕಾರ್ಯಕ್ರಮ ಮುಗಿಸಿ ಎಲ್ಲ ಉಪಕರಣಗಳನ್ನು ಒಂದು ರೂಮಿನಲ್ಲಿ ಇಟ್ಟು ಬೀಗ ಹಾಕಿಕೊಂಡು ಹೋಗಿದ್ದರು.

ಅದೇ ದಿನ ರಾತ್ರಿ ಕಳ್ಳರು ಶಾಲೆಯ ಬೀಗ ಒಡೆದು ಸುಮಾರು 40 ಸಾವಿರ ಮೌಲ್ಯದ ಪ್ರೊಜೆಕ್ಟರ್, ಎರಡು ಸಾವಿರ ಹಣ ಹಾಗೂ ಉಳಿದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ. 

ಜೊತೆಗೆ, ಕೊಟ್ಟಿಗೆಹಾರದ ಕೋಳಿ ಅಂಗಡಿ ಹಾಗೂ ಗ್ಯಾರೇಜ್ನಲ್ಲೂ ಹಣವನ್ನು ದೋಚಿದ್ದಾರೆ. ಹೀಗೆ ಸರಣಿ ಕಳ್ಳತನ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಕೊಟ್ಟಿಗೆಹಾರದ ಜನ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕೊಟ್ಟಿಗೆಹಾರದಲ್ಲಿ ಈ ಹಿಂದೆ ಕೂಡ ಸರಣಿ ಕಳ್ಳತನ ನಡೆದಿದೆ. ಪೊಲೀಸರು ಯಾರನ್ನೂ ಬಂಧಿಸಿಲ್ಲ. ಅತ್ತಿಗೆರೆಯ ಸೋಮೇಶ್ವರ್ ದೇವಸ್ಥಾನದಲ್ಲಿ 18 ಗಂಟೆಗಳನ್ನ ಕಳ್ಳತನ ಮಾಡಿದ್ದರು.

ಪೊಲೀಸರ ವೈಫಲ್ಯವೇ ಹೀಗೆ ಸರಣಿ ಕಳ್ಳತನ ನಡೆಯಲು ಕಾರಣ. ಮೇಲಿಂದ ಮೇಲೆ ಕಳ್ಳತನ ನಡೆಯುತ್ತಿದ್ದರೂ ಪೊಲೀಸರು ಕಳ್ಳರನ್ನ ಹಿಡಿಯದಿದ್ದರೆ ಕಳ್ಳರಿಗೆ ಪೊಲೀಸರ ಮೇಲೆ ಭಯ ಇರುವುದಿಲ್ಲ. ಸರಣಿ ಕಳ್ಳತನ ನಡೆಯುವುದದರಿಂದ ಕೊಟ್ಟಿಗೆಹಾರದ ಜನ ಕೂಡ ಆತಂಕದಿದ್ದಾರೆ. ಕೂಡಲೇ ಪೊಲೀಸರು ಕಳ್ಳರನ್ನ ಬಂಧಿಸಬೇಕೆಂದು ಕೊಟ್ಟಿಗೆಹಾರದ ಜನ ಪೊಲೀಸರಲ್ಲಿ ಮನವಿ ಮಾಡಿದರು. 

ಪ್ರಕರಣ ದಾಖಲಿಸಿಕೊಂಡ ಬಣಕಲ್ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಪೊಲೀಸ್ ಶ್ವಾನದೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಕಳ್ಳತನಕ್ಕೆ ಬಂದಿದ್ದ ಕಳ್ಳರು ತಂದಿದ್ದ ರಾಡ್ಗಳನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ. ಪೊಲೀಸರು ಅವುಗಳನ್ನೂ ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments