Select Your Language

Notifications

webdunia
webdunia
webdunia
webdunia

ಟಿಪ್ಪು ಜಯಂತಿ ಆಚರಿಸಿದ ಸರಕಾರಕ್ಕೆ ನಾಚಿಕೆಯಾಗಬೇಕು: ಆರ್.ಅಶೋಕ್

ಟಿಪ್ಪು ಜಯಂತಿ ಆಚರಿಸಿದ ಸರಕಾರಕ್ಕೆ ನಾಚಿಕೆಯಾಗಬೇಕು: ಆರ್.ಅಶೋಕ್
ಬೆಂಗಳೂರು , ಗುರುವಾರ, 10 ನವೆಂಬರ್ 2016 (12:29 IST)
ಮತಾಂಧ, ಹಿಂದೂ ವಿರೋಧಿಯಾಗಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸುತ್ತಿರುವುದಕ್ಕೆ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಗುಡುಗಿದ್ದಾರೆ.
 
ಬಿಜೆಪಿ ಪಕ್ಷ ಮುಸ್ಲಿಂ ಸಮುದಾಯದ ವಿರೋಧಿಯಲ್ಲ. ಮಾಜಿ ಪ್ರದಾನಿ ವಾಜಪೇಯಿ ಡಾ.ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿರುವುದನ್ನು ಮರೆಯಬಾರದು ಎಂದು ಹೇಳಿದ್ದಾರೆ. 
 
ಟಿಪ್ಪು ಜಯಂತಿ ಆಚರಿಸಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. 
 
ದೇವನಹಳ್ಳಿ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಸರಕಾರ ಟಿಪ್ಪು ಜಯಂತಿ ಆಚರಿಸುವುದನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಟಿಪ್ಪು ಜಯಂತಿ ಆಚರಿಸಿದ ಸರಕಾರಕ್ಕೆ ಮಾನ ಮರ್ಯಾದೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಬೇಕೆ ಕೆಲಸ! ಇಲ್ಲಿ ಜಾಲಾಡಿ