Webdunia - Bharat's app for daily news and videos

Install App

ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು- ಬೊಮ್ಮಾಯಿ

Webdunia
ಬುಧವಾರ, 26 ಜುಲೈ 2023 (15:47 IST)
ತನ್ವೀರ್ ಸೇಟ್ ಪತ್ರದ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ‌ ಖಂಡನೆ ವ್ಯಕ್ತಪಡಿಸಿದ್ದಾರೆ.ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ಬಹಳ ಗಂಭೀರ ಆಗಿವೆ.ಪೊಲೀಸ್ ಠಾಣೆ ಸುಟ್ಡಿದ್ದಾರೆ, ಶಾಸಕನ ಮನೆ ಸುಟ್ಟಿದ್ದಾರೆ.ಇಂಥ ಕೇಸ್ ಗಳನ್ನು ವಾಪಸ್ ಪಡೆಯಲು ಹೋಗ್ತಿರೋದು ಸರಿಯಲ್ಲ.ಇವರೆಲ್ಲ ರಾಜ್ಯದ ವಿರುದ್ಧ ದಂಗೆ ಎದ್ದವರು ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.
 
ಅಲ್ಲದೇ ಇಂಥ ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು.ಸರ್ಕಾರ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು.ಹೊರದೇಶಗಳ ಶಕ್ತಿಗಳ ಕುಮ್ಮಕ್ಕಿನಿಂದ ಇಂತಹ ಕೃತ್ಯಗಳು ನಡೀತಿವೆ.ಸಿಎಂಗೂ ಈ ಥರದ ಕೇಸ್ ಗಳ ವಾಪಸಾತಿ ಗೆ ಮನವಿ ಕೊಟ್ಟಿದ್ದಾರೆ ಅಂತ ಕೇಳಿಬಂದಿದೆ.ಸಿಎಂ ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು.ವಿದ್ರೋಹಿ ಶಕ್ತಿಗಳ ಪರ ಸರ್ಕಾರ ನಿಲ್ಲಬಾರದು ಎಂದು ಬೊಮ್ಮಾಯಿ‌ ಆಹ್ರಿಸಿದ್ದಾರೆ.
 
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಡಿಯೋ‌ಮಾಡಿರೋದು ಹೇಯ ಕೃತ್ಯ, ಖಂಡನೀಯ.ಒಬ್ಬ ವಿದ್ಯಾರ್ಥಿನಿ ಇದನ್ನು ಬಯಲಿಗೆಳೆದರೆ ಆಕೆ ವಿರುದ್ಧವೇ ಪೊಲೀಸರು ತನಿಖೆ ಮಾಡ್ತಾರೆ.ಪೊಲೀಸರು ಯಾರ ಒತ್ತಡಕ್ಕೆ ಕೆಲಸ ಮಾಡ್ತಿದಾರೆ.ಪೊಲೀಸರು ಏನೂ ಆಗಿಲ್ಲ ಅಂತಿದಾರೆ.ಹಾಗಾದ್ರೆ ಕಾಲೇಜಿನವ್ರು ಸುಮ್ ಸುಮ್ನೆ ಆ ಮೂವರು ವಿದ್ಯಾರ್ಥಿನಿಯರ ಸಸ್ಪೆಂಡ್ ಮಾಡಿದ್ದೇಕೆ?ಯಾಕೆ ಆ ವಿದ್ಯಾರ್ಥಿನಿಯರು ತಪ್ಪೊಪ್ಪಿಗೆ ಬರೆದುಕೊಡಬೇಕು..?ಅವರ ತಪ್ಪೊಪ್ಪಿಗೆ ಪತ್ರ ಒಂದೇ ಸಾಕು ಅವರ ವಿರುದ್ಧ ಕೇಸ್ ಹಾಕಲು ಅಂತಾ ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments