Webdunia - Bharat's app for daily news and videos

Install App

ಮಹಾರಾಷ್ಟ್ರಕ್ಕೆ ಮಣಿದ ಸರಕಾರ; ಕೋಯ್ನಾ ನೀರು ಬರುತ್ತೆ ಎಂದ ಡಿಕೆಶಿ

Webdunia
ಭಾನುವಾರ, 12 ಮೇ 2019 (14:11 IST)
ಮಹಾರಾಷ್ಟ್ರದ  ಒತ್ತಡಕ್ಕೆ ಕೊನೆಗೂ ರಾಜ್ಯ ಸರಕಾರ ಮಣಿದಿದೆ.

ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವ ಸಂಬಂಧ ಮಹಾರಾಷ್ಟ್ರದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ. ಇಂದು ಸಂಜೆಯೊಳಗಾಗಿ ಕಡತಕ್ಕೆ ಸಹಿ ಮಾಡಿ ಕಳುಹಿಸುವುದಾಗಿ ಪ್ರಕಟಿಸಿದ್ದಾರೆ  ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್.

ಡಿ.ಕೆ.ಶಿವಕುಮಾರ್ ಈ ಕುರಿತು ಮಾತನಾಡಿದ್ದು, ನಮಗೆ ರಾಜ್ಯದ ಜನರ ಹಿತ ಮುಖ್ಯ. ನಮ್ಮ ಉತ್ತರ ಕರ್ನಾಟಕದ ಜನರಿಗೆ ತುರ್ತಾಗಿ ನೀರು ಕೊಡಲೇಬೇಕು. ಮೊದಲೆಲ್ಲಾ ಕರ್ನಾಟಕದಿಂದ ಹಣ ಪಡೆದು ನೀರು ಬಿಡುಗಡೆ ಮಾಡುತ್ತಿದ್ದ ಮಹಾರಾಷ್ಟ್ರ ಸರ್ಕಾರ ಈ ಬಾರಿ ವರಸೆ ಬದಲಿಸಿದೆ.

ನೀರಿಗೆ ಬದಲಾಗಿ ಕರ್ನಾಟಕದಿಂದಲೂ ನೀರು ಕೊಡಲೇಬೇಕು. ಈ ಸಂಬಂಧ ಲಿಖಿತ ಒಪ್ಪಂದ ಮಾಡಿಕೊಳ್ಳುವಂತೆ ಪಟ್ಟು ಹಿಡಿದಿದೆ. ಮೊದಲು ಮಾನವೀಯತೆಯ ದೃಷ್ಟಿಯಿಂದ ನೀರು ಬಿಡಲು ಒಪ್ಪಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಇದ್ದಕ್ಕಿದ್ದಂತೆ ತಮ್ಮ ಮಾತಿಗೆ ತಪ್ಪಿದ್ದಾರೆ. ಆದರೂ ನಮ್ಮ ರಾಜ್ಯದ ಜನರಿಗಾಗಿ ಅವರ ಒತ್ತಡಕ್ಜೆ ನಾವು ಮಣಿದಿದ್ದೇವೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments