Webdunia - Bharat's app for daily news and videos

Install App

ಸರ್ಕಾರಿ ಜಾಗ, ಸ್ಮಶಾನ ಉಳಿಸುವಂತೆ ಪ್ರತಿಭಟನೆ

Webdunia
ಮಂಗಳವಾರ, 29 ಜನವರಿ 2019 (16:48 IST)
ಸರ್ಕಾರಿ ಜಾಗ, ಸ್ಮಶಾನ ಉಳಿಸುವಂತೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.

ಹಲವು ರೈತ ಸಂಘಟನೆಯಿಂದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಚೇರಿ ಮುಂದೆ ಅಹೋ ರಾತ್ರಿ ಧರಣಿಗೆ ನಿರ್ಧಾರ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರ ವಿರುದ್ಧ ಧಿಕ್ಕಾರ ಕೂಗಿದ ರೈತರು, ಕೂಡಲೇ ಸ್ಥಳಕ್ಕೆ ತಹಶಿಲ್ದಾರರು ಹಾಗು ಜಿಲ್ಲಾಧಿಕಾರಿ ಬರುವಂತೆ ಒತ್ತಾಯ ಮಾಡಿದರು.

ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸದಿದ್ದರೆ ಮನೆಯಲ್ಲಿರುವ ಜಾನುವಾರುಗಳನ್ನು ತಂದು ಅಹೋ ರಾತ್ರಿ ಹೋರಾಟದ ನಿರ್ಧಾರಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು, ತಾಲ್ಲೂಕು ಕಚೇರಿ ಮುಂದೆ ಧರಣಿಯಲ್ಲಿ ಭಾಗಿಯಾಗಿದ್ದಾರೆ. ತಾಲ್ಲೂಕು  ಕಚೇರಿ ಮುಂದೆ ಒಲೆ ಹಚ್ಚಿ ಅಡುಗೆ ಮಾಡಿದ ರೈತರು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳನ್ನು ಹೊರಕಳಿಸಿ ತಾಲ್ಲೂಕು ಕಚೇರಿಗೆ ಬೀಗ ಜಡಿದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments