Webdunia - Bharat's app for daily news and videos

Install App

ಕೃಷಿ ಕಾರ್ಮಿಕರಿಗೆ ವಿದೇಶಿ ಪ್ರವಾಸದ ಭಾಗ್ಯ...

Webdunia
ಮಂಗಳವಾರ, 4 ಅಕ್ಟೋಬರ್ 2016 (16:45 IST)
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ರಾಜ್ಯದ ರೈತ ಕಾರ್ಮಿಕರನ್ನು ಕೃಷಿ ಅಧ್ಯಯನಕ್ಕಾಗಿ ಚೀನಾ ಹಾಗೂ ಇಸ್ರೇಲ್ ಪ್ರವಾಸಕ್ಕೆ ಕಳುಹಿಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಲ್ಲಿರೋ ಕೃಷಿ ಮಾದರಿ ಅಧ್ಯಯನಕ್ಕಾಗಿ ಕೃಷಿ ಕಾರ್ಮಿಕರನ್ನು ಮಾರ್ಚ್ ಅಂತ್ಯದೊಳಗೆ ಚೀನಾ ಹಾಗೂ ಇಸ್ರೇಲ್ ರಾಷ್ಟ್ರಕ್ಕೆ ಕಳುಹಿಸಲಾಗುತ್ತಿದ್ದು, ಒಟ್ಟು 25 ಕೋಟಿ ರೂಪಾಯಿ ವೆಚ್ಚದಲ್ಲಿ 2500 ಕೃಷಿಕರನ್ನು ಕಳುಹಿಸುವುದಾಗಿ ಹೇಳಿದರು. 
 
ವಿದೇಶದಲ್ಲಿನ ಆಧುನಿಕ ಕೃಷಿ ತಂತ್ರಜ್ಞಾನದ ಕುರಿತು ತಿಳಿಯಲು ಪ್ರವಾಸ ಆಯೋಜಿಸಲಾಗಿದೆ. ಅಧ್ಯಯನದ ನಂತರ ಚೀನಾ ತಂತ್ರಜ್ಞಾನದ ಆಧುನಿಕ ಕೃಷಿ ಮಾದರಿಯನ್ನು ರಾಜ್ಯದಲ್ಲಿ ಉಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
 
ಅಧ್ಯಯನ ಕೈಗೊಳ್ಳುವ ರೈತರು ಭೂ ರಹಿತರಾಗಿದ್ದರೇ ಅವರಿಗೆ ಸರಕಾರದಿಂದ ಭೂಮಿ ನೀಡಲಾಗುತ್ತೆ. ಈ ಯೋಜನೆ ಅಡಿಯಲ್ಲಿ 19,542 ಕೋಟಿ ರೂಪಾಯಿ ಹಣ ಇದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments