Webdunia - Bharat's app for daily news and videos

Install App

ಕೃಷಿ ಕಾರ್ಮಿಕರಿಗೆ ವಿದೇಶಿ ಪ್ರವಾಸದ ಭಾಗ್ಯ...

Webdunia
ಮಂಗಳವಾರ, 4 ಅಕ್ಟೋಬರ್ 2016 (16:45 IST)
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ರಾಜ್ಯದ ರೈತ ಕಾರ್ಮಿಕರನ್ನು ಕೃಷಿ ಅಧ್ಯಯನಕ್ಕಾಗಿ ಚೀನಾ ಹಾಗೂ ಇಸ್ರೇಲ್ ಪ್ರವಾಸಕ್ಕೆ ಕಳುಹಿಸಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಲ್ಲಿರೋ ಕೃಷಿ ಮಾದರಿ ಅಧ್ಯಯನಕ್ಕಾಗಿ ಕೃಷಿ ಕಾರ್ಮಿಕರನ್ನು ಮಾರ್ಚ್ ಅಂತ್ಯದೊಳಗೆ ಚೀನಾ ಹಾಗೂ ಇಸ್ರೇಲ್ ರಾಷ್ಟ್ರಕ್ಕೆ ಕಳುಹಿಸಲಾಗುತ್ತಿದ್ದು, ಒಟ್ಟು 25 ಕೋಟಿ ರೂಪಾಯಿ ವೆಚ್ಚದಲ್ಲಿ 2500 ಕೃಷಿಕರನ್ನು ಕಳುಹಿಸುವುದಾಗಿ ಹೇಳಿದರು. 
 
ವಿದೇಶದಲ್ಲಿನ ಆಧುನಿಕ ಕೃಷಿ ತಂತ್ರಜ್ಞಾನದ ಕುರಿತು ತಿಳಿಯಲು ಪ್ರವಾಸ ಆಯೋಜಿಸಲಾಗಿದೆ. ಅಧ್ಯಯನದ ನಂತರ ಚೀನಾ ತಂತ್ರಜ್ಞಾನದ ಆಧುನಿಕ ಕೃಷಿ ಮಾದರಿಯನ್ನು ರಾಜ್ಯದಲ್ಲಿ ಉಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
 
ಅಧ್ಯಯನ ಕೈಗೊಳ್ಳುವ ರೈತರು ಭೂ ರಹಿತರಾಗಿದ್ದರೇ ಅವರಿಗೆ ಸರಕಾರದಿಂದ ಭೂಮಿ ನೀಡಲಾಗುತ್ತೆ. ಈ ಯೋಜನೆ ಅಡಿಯಲ್ಲಿ 19,542 ಕೋಟಿ ರೂಪಾಯಿ ಹಣ ಇದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments