Webdunia - Bharat's app for daily news and videos

Install App

ಮಿನಿ ಏರ್‌ಪೋರ್ಟ್‌ಗೆ ಸರ್ಕಾರ ಚಿಂತನೆ?

Webdunia
ಮಂಗಳವಾರ, 31 ಮೇ 2022 (15:26 IST)
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿಲು ರಾಜ್ಯ ಸರ್ಕಾರ ಮಿನಿ ವಿಮಾನ ನಿಲ್ದಾಣ ಅಥವಾ ಹೆಲಿಪೋರ್ಟ್ ನಿರ್ಮಿಸಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಕೊಡಗಿನ ಸ್ಥಳವನ್ನು ಗುರುತು ಮಾಡಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಪರಿಶೀಲನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆ ಸ್ಥಳದಲ್ಲೇ ಮಿನಿ ವಿಮಾನ ನಿಲ್ದಾಣ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತಷ್ಟು ಚೇತರಿಕೆ ಕಾಣುವ ಎಲ್ಲಾ ಅಂಶಗಳು ಕಂಡು ಬರುತ್ತಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸೈನಿಕ ಶಾಲೆಯ ಪಕ್ಕದಲ್ಲಿರುವ 49.5 ಎಕರೆ ಕೃಷಿ ಇಲಾಖೆಯ ಜಾಗದಲ್ಲಿ ಮಿನಿ ವಿಮಾನ ನಿಲ್ದಾಣ ಅಥವಾ ಹೆಲಿಪೋರ್ಟ್ ನಿರ್ಮಿಸಲಾಗುವುದು ಎಂದು ಕೆಲವು ದಿನಗಳ ಹಿಂದೆ ಪ್ರಸ್ತಾಪಿಸಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಅಧಿಕಾರಿಗಳು ಮತ್ತು ತಾಂತ್ರಿಕ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಎಸ್ಐಐಡಿಸಿ) ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಡಾ. ಎಂಆರ್ ರವಿ, ಡಿ.ಎಂ. ಪೂರ್ವಿಮಠ್(ವಿಎಸ್ಎಂ), ಕೆಎಸ್ಐಐಡಿಸಿ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ್, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪ್ರಾಜೆಕ್ಟ್ ತಾಂತ್ರಿಕ ಸಲಹೆಗಾರ ಬ್ರಿಗ್ ಹೀಗೆ ಮತ್ತಿತರು ಸ್ಥಳ ಪರಿಶೀಲನೆ ನಡೆಸಿದ್ದಾರೆ. 

ಪರಿಶೀಲನೆ ನಡೆಸಿರುವ ಭೂಮಿ ಚಿಕ್ಕತ್ತೂರು ಗ್ರಾಮದಲ್ಲಿದ್ದು, 20 ಆಸನಗಳ ವಿಮಾನಗಳು ಇಳಿಯಬಹುದಾದ ಮಿನಿ ವಿಮಾನ ನಿಲ್ದಾಣ ಅಥವಾ ಮೈಸೂರು, ಹಂಪಿ ಹಾಗೂ ಚಿಕ್ಕಮಗಳೂರಿನ ಯೋಜಿತ ಹೆಲಿ-ಪೋರ್ಟ್ಗಳನ್ನು ಸಂಪರ್ಕಿಸುವ ಹೆಲಿ-ಪೋರ್ಟ್ ಅನ್ನು ನಿರ್ಮಿಸಲು ಯೋಜಿಸಲಾಗಿದೆ. ಈ ಎರಡೂ ಯೋಜನೆಗಳು ಕೊಡಗು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ