Webdunia - Bharat's app for daily news and videos

Install App

ರೈತರ ಹೋರಾಟಕ್ಕೆ ಮಣಿದ ಸರ್ಕಾರ: ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ ವಾಪಸ್‌ಗೆ ನಿರ್ಧಾರ

Sampriya
ಸೋಮವಾರ, 28 ಅಕ್ಟೋಬರ್ 2024 (14:48 IST)
Photo Courtesy X
ಬೆಂಗಳೂರು: ರಾಜ್ಯದಾದ್ಯಂತ ವಿವಾದ ಸೃಷ್ಟಿಯಾದ ಬೆನ್ನಲ್ಲೇ ವಿಜಯಪುರದ ರೈತರಿಗೆ ‌ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ ಅನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ  ಹೆಚ್.ಕೆ. ಪಾಟೀಲ್ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೋಟಿಸ್ ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಅಲ್ಲದೆ ತಪ್ಪಿನ ಬಗ್ಗೆ ವಿಚಾರಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸರ್ಕಾರಕ್ಕೆ ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ರೈತರಿಗೆ ನೋಟಿಸ್‌ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಎಂ. ಬಿ ಪಾಟೀಲ್ ಈಗಾಗಲೇ ಹೇಳಿದ್ದಾರೆ. ಸರ್ಕಾರ ನೋಟಿಸ್‌ ವಾಪಸ್ ಪಡೆಯಲಿದೆ. ಅಲ್ಲಿನ ತಹಶಿಲ್ದಾರ್ ತಪ್ಪು ಮಾಡಿದ್ದಾರೆ. ಹೀಗಾಗಿ ನೋಟಿಸ್‌ ವಾಪಸ್ ಪಡೆಯೋ ಕೆಲಸ ಮಾಡ್ತೀವಿ ಎಂದಿದ್ದಾರೆ.

ಅಲ್ಲಿ ತಹಶೀಲ್ದಾರ್ ತಪ್ಪು‌ ಮಾಡಿರೋದು. ತಹಶಿಲ್ದಾರ್ ನೊಟೀಸ್ ಕೊಟ್ಟಿದ್ರೆ ಅದನ್ನು ಡಿಸಿ ನೋಡ್ತಾರೆ. ಅದಕ್ಕೂ ಮೇಲೆ ಸರ್ಕಾರ ಇದೆ. ಹೀಗಿರುವಾಗ ಸಚಿವ ಜಮೀರ್ ಅಹಮ್ಮದ್‌ ಯಾಕೆ ರಾಜೀನಾಮೆ ಕೊಡಬೇಕು?  ಎಂ.ಬಿ ‌ಪಾಟೀಲ್ ಎಲ್ಲಾ ಗೊಂದಲಗಳನ್ನ ನಿವಾರಣೆ ಮಾಡಿದ್ದಾರೆ. ಈಗ ಯಾವುದೇ ಗೊಂದಲ‌ ಇಲ್ಲ. ರೈತರ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ತಪ್ಪಿದಲ್ಲಿ ಅದನ್ನು ಸರಿಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಮುಂದಿನ ಸುದ್ದಿ
Show comments