ವಿಶ್ವಾಸ ಮತ ಸಾಬೀತಿಗೆ 1.30 ರ ಡೆಡ್ ಲೈನ್ ನೀಡಿದ ರಾಜ್ಯಪಾಲರು

Webdunia
ಶುಕ್ರವಾರ, 19 ಜುಲೈ 2019 (09:57 IST)
ಬೆಂಗಳೂರು: ನಿನ್ನೆ ನಡೆಯಬೇಕಿದ್ದ ವಿಶ್ವಾಸ ಮತ ಪ್ರಕ್ರಿಯೆ ಆಡಳಿತ, ವಿಪಕ್ಷಗಳ ಗದ್ದಲದಿಂದಾಗಿ ನಡೆದಿರಲಿಲ್ಲ. ಆದರೆ ಇಂದು ವಿಶ್ವಾಸಮತ ಸಾಬೀತುಪಡಿಸಲೇಬೇಕೆಂದು ರಾಜ್ಯಪಾಲ ವಜೂಬಾಯ್ ವಾಲಾ ಸಿಎಂ ಕುಮಾರಸ್ವಾಮಿಗೆ ಸಮಯ ನಿಗದಿ ಮಾಡಿದ್ದಾರೆ.


ಇಂದು ಮಧ್ಯಾಹ್ನ 1.30 ರೊಳಗೆ ವಿಶ್ವಾಸ ಮತ ಸಾಬೀತುಪಡಿಸುವಂತೆ ಸಿಎಂಗೆ ರಾಜ್ಯಪಾಲರು ಪತ್ರಮುಖೇನ ಸೂಚನೆ ನೀಡಿದ್ದಾರೆ. ನಿನ್ನೆಯೇ ಸದನದ ನಡುವೆ ರಾಜ್ಯಪಾಲರು ಸಂದೇಶ ರವಾನಿಸಿದರೂ, ರಾಜ್ಯಪಾಲರಿಗೆ ಈ ವಿಚಾರದಲ್ಲಿ ಸೂಚನೆ ನೀಡುವ ಹಕ್ಕಿಲ್ಲ ಎಂದು ಆಡಳಿತ ಪಕ್ಷದ ಸದಸ್ಯರು ತಳ್ಳಿ ಹಾಕಿದ್ದರು.

ಆದರೆ ಬಿಜೆಪಿ ರಾಜ್ಯಪಾಲರ ಬಳಿ ತೆರಳಿ ಆಡಳಿತ ಪಕ್ಷದ ಸದಸ್ಯರು ವಿಶ್ವಾಸ ಮತ ಯಾಚಿಸುವ ಮುಖ್ಯ ಅಜೆಂಡಾ ಬಿಟ್ಟು ಬೇರೆ ಚರ್ಚೆ ನಡೆಸುತ್ತಾ ಕಾಲ ಹರಣ ಮಾಡುತ್ತಿದ್ದಾರೆ ಎಂದು ದೂರಿದ ಹಿನ್ನಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿದ್ದಾರೆ. ಹೀಗಾಗಿ ಇಂದು ಸಿಎಂ ವಿಶ್ವಾಸ ಮತ ಯಾಚನೆ ಮಾಡಬೇಕಿದೆ. ಅದರ ನಡುವೆ ಕಾಂಗ್ರೆಸ್ ವಿಪ್ ಬಗ್ಗೆ ಎತ್ತಿರುವ ಸಂಶಯದ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದರೆ ಈ ಡೆಡ್ ಲೈನ್ ಏನಾಗಬಹುದು ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments