Webdunia - Bharat's app for daily news and videos

Install App

ವಿಶ್ವಾಸ ಮತ ಸಾಬೀತಿಗೆ 1.30 ರ ಡೆಡ್ ಲೈನ್ ನೀಡಿದ ರಾಜ್ಯಪಾಲರು

Webdunia
ಶುಕ್ರವಾರ, 19 ಜುಲೈ 2019 (09:57 IST)
ಬೆಂಗಳೂರು: ನಿನ್ನೆ ನಡೆಯಬೇಕಿದ್ದ ವಿಶ್ವಾಸ ಮತ ಪ್ರಕ್ರಿಯೆ ಆಡಳಿತ, ವಿಪಕ್ಷಗಳ ಗದ್ದಲದಿಂದಾಗಿ ನಡೆದಿರಲಿಲ್ಲ. ಆದರೆ ಇಂದು ವಿಶ್ವಾಸಮತ ಸಾಬೀತುಪಡಿಸಲೇಬೇಕೆಂದು ರಾಜ್ಯಪಾಲ ವಜೂಬಾಯ್ ವಾಲಾ ಸಿಎಂ ಕುಮಾರಸ್ವಾಮಿಗೆ ಸಮಯ ನಿಗದಿ ಮಾಡಿದ್ದಾರೆ.


ಇಂದು ಮಧ್ಯಾಹ್ನ 1.30 ರೊಳಗೆ ವಿಶ್ವಾಸ ಮತ ಸಾಬೀತುಪಡಿಸುವಂತೆ ಸಿಎಂಗೆ ರಾಜ್ಯಪಾಲರು ಪತ್ರಮುಖೇನ ಸೂಚನೆ ನೀಡಿದ್ದಾರೆ. ನಿನ್ನೆಯೇ ಸದನದ ನಡುವೆ ರಾಜ್ಯಪಾಲರು ಸಂದೇಶ ರವಾನಿಸಿದರೂ, ರಾಜ್ಯಪಾಲರಿಗೆ ಈ ವಿಚಾರದಲ್ಲಿ ಸೂಚನೆ ನೀಡುವ ಹಕ್ಕಿಲ್ಲ ಎಂದು ಆಡಳಿತ ಪಕ್ಷದ ಸದಸ್ಯರು ತಳ್ಳಿ ಹಾಕಿದ್ದರು.

ಆದರೆ ಬಿಜೆಪಿ ರಾಜ್ಯಪಾಲರ ಬಳಿ ತೆರಳಿ ಆಡಳಿತ ಪಕ್ಷದ ಸದಸ್ಯರು ವಿಶ್ವಾಸ ಮತ ಯಾಚಿಸುವ ಮುಖ್ಯ ಅಜೆಂಡಾ ಬಿಟ್ಟು ಬೇರೆ ಚರ್ಚೆ ನಡೆಸುತ್ತಾ ಕಾಲ ಹರಣ ಮಾಡುತ್ತಿದ್ದಾರೆ ಎಂದು ದೂರಿದ ಹಿನ್ನಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿದ್ದಾರೆ. ಹೀಗಾಗಿ ಇಂದು ಸಿಎಂ ವಿಶ್ವಾಸ ಮತ ಯಾಚನೆ ಮಾಡಬೇಕಿದೆ. ಅದರ ನಡುವೆ ಕಾಂಗ್ರೆಸ್ ವಿಪ್ ಬಗ್ಗೆ ಎತ್ತಿರುವ ಸಂಶಯದ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದರೆ ಈ ಡೆಡ್ ಲೈನ್ ಏನಾಗಬಹುದು ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments