Webdunia - Bharat's app for daily news and videos

Install App

ವಿಶ್ವಾಸ ಮತ ಸಾಬೀತಿಗೆ 1.30 ರ ಡೆಡ್ ಲೈನ್ ನೀಡಿದ ರಾಜ್ಯಪಾಲರು

Webdunia
ಶುಕ್ರವಾರ, 19 ಜುಲೈ 2019 (09:57 IST)
ಬೆಂಗಳೂರು: ನಿನ್ನೆ ನಡೆಯಬೇಕಿದ್ದ ವಿಶ್ವಾಸ ಮತ ಪ್ರಕ್ರಿಯೆ ಆಡಳಿತ, ವಿಪಕ್ಷಗಳ ಗದ್ದಲದಿಂದಾಗಿ ನಡೆದಿರಲಿಲ್ಲ. ಆದರೆ ಇಂದು ವಿಶ್ವಾಸಮತ ಸಾಬೀತುಪಡಿಸಲೇಬೇಕೆಂದು ರಾಜ್ಯಪಾಲ ವಜೂಬಾಯ್ ವಾಲಾ ಸಿಎಂ ಕುಮಾರಸ್ವಾಮಿಗೆ ಸಮಯ ನಿಗದಿ ಮಾಡಿದ್ದಾರೆ.


ಇಂದು ಮಧ್ಯಾಹ್ನ 1.30 ರೊಳಗೆ ವಿಶ್ವಾಸ ಮತ ಸಾಬೀತುಪಡಿಸುವಂತೆ ಸಿಎಂಗೆ ರಾಜ್ಯಪಾಲರು ಪತ್ರಮುಖೇನ ಸೂಚನೆ ನೀಡಿದ್ದಾರೆ. ನಿನ್ನೆಯೇ ಸದನದ ನಡುವೆ ರಾಜ್ಯಪಾಲರು ಸಂದೇಶ ರವಾನಿಸಿದರೂ, ರಾಜ್ಯಪಾಲರಿಗೆ ಈ ವಿಚಾರದಲ್ಲಿ ಸೂಚನೆ ನೀಡುವ ಹಕ್ಕಿಲ್ಲ ಎಂದು ಆಡಳಿತ ಪಕ್ಷದ ಸದಸ್ಯರು ತಳ್ಳಿ ಹಾಕಿದ್ದರು.

ಆದರೆ ಬಿಜೆಪಿ ರಾಜ್ಯಪಾಲರ ಬಳಿ ತೆರಳಿ ಆಡಳಿತ ಪಕ್ಷದ ಸದಸ್ಯರು ವಿಶ್ವಾಸ ಮತ ಯಾಚಿಸುವ ಮುಖ್ಯ ಅಜೆಂಡಾ ಬಿಟ್ಟು ಬೇರೆ ಚರ್ಚೆ ನಡೆಸುತ್ತಾ ಕಾಲ ಹರಣ ಮಾಡುತ್ತಿದ್ದಾರೆ ಎಂದು ದೂರಿದ ಹಿನ್ನಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿದ್ದಾರೆ. ಹೀಗಾಗಿ ಇಂದು ಸಿಎಂ ವಿಶ್ವಾಸ ಮತ ಯಾಚನೆ ಮಾಡಬೇಕಿದೆ. ಅದರ ನಡುವೆ ಕಾಂಗ್ರೆಸ್ ವಿಪ್ ಬಗ್ಗೆ ಎತ್ತಿರುವ ಸಂಶಯದ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದರೆ ಈ ಡೆಡ್ ಲೈನ್ ಏನಾಗಬಹುದು ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments