Webdunia - Bharat's app for daily news and videos

Install App

ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ: ರಾಜ್ಯಾಪಾಲ ರಾಜೀನಾಮೆ ಸಾಧ್ಯತೆ

Webdunia
ಸೋಮವಾರ, 19 ಮೇ 2014 (15:15 IST)
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಅವಧಿಗೆ ಮುನ್ನವೇ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
 
2009, ಜೂನ್ 24ರಂದು ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದ ಹಂಸರಾಜ್ ಭಾರದ್ವಾಜ್ ಅವರ ಅಧಿಕಾರ ಅವಧಿ ಜೂನ್ 29ರವರೆಗೆ ಇದೆ. ಆದರೆ ಅವಧಿಗೆ ಮುನ್ನವೇ ಅವರು ರಾಜಿನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
 
ಈ ಸಂಬಂಧ ಇತ್ತೀಚಿಗಷ್ಟೇ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿದ್ದ ಭಾರದ್ವಾಜ್ ಅವರು ತಾವು ರಾಜಭವನ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಚುನಾವಣೆ ಫಲಿತಾಂಶದ ಬಳಿಕ ತನ್ನ ನಿರ್ಧಾರ ಪ್ರಕಟಿಸುವುದಾಗಿ ಕಾಂಗ್ರೆಸ್ ಹೈಕಮಾಂಡ್ ತಿಳಿಸಿತ್ತು.
 
ಹಂಸರಾಜ್ ಭಾರದ್ವಾಜ್ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿದ್ದರು. ಜತೆಗೆ ಆಡಳಿತ ವೈಖರಿ ಬಗ್ಗೆ ಸಾರ್ವಜನಿಕವಾಗಿ ಟೀಕಿಸಿ, ಚಾಟಿ ಬೀಸುವ ಕೆಲಸ ಮಾಡುತ್ತಿದ್ದರು. ವಿಶೇಷ ಎಂದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದಮೇಲೂ ಅವರು ಆಗಾಗ್ಗೆ ಸರ್ಕಾರಕ್ಕೆ ಚಾಟಿ ಏಟು ನೀಡುತ್ತಲೇ ಇದ್ದಾರೆ.
 
ಕಾಂಗ್ರೆಸ್ ಸರ್ಕಾರದ ಪಾಲಿಗೂ ಭಾರವಾಗಿದ್ದ ಭಾರದ್ವಾಜ್ ಅವರು ರಾಜೀನಾಮೆ ನೀಡುತ್ತಿರುವುದು ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಸಹೋದ್ಯೋಗಿಗಳಿಗೆ ಸಂತಸದ ವಿಚಾರ. ಆದರೆ, ಮುಂದೆ ನೇಮಕವಾಗುವ ರಾಜ್ಯಪಾಲರು ಮಗ್ಗುಲ ಮುಳ್ಳಾಗುವುದಿಲ್ಲ ಎಂದು ಹೇಳಲಾಗದು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments