Webdunia - Bharat's app for daily news and videos

Install App

ಪರಿಷತ್‌ಗೆ ಸಿಎಂ ಲಿಂಗಪ್ಪ ನಾಮಕರಣಕ್ಕೆ ರಾಜ್ಯಪಾಲರ ನಕಾರ

Webdunia
ಬುಧವಾರ, 17 ಮೇ 2017 (20:18 IST)
ಪರಿಷತ್‌ಗೆ ಸಿಎಂ ಲಿಂಗಪ್ಪ ನಾಮನಿರ್ದೇಶನಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ ಎನ್ನುವ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ನನಗೆ ಗೊತ್ತಿಲ್ಲ ನೋಡಿ ಹೇಳ್ತೇನೆ ಎಂದು ಹೇಳಿದ್ದಾರೆ.
 
ಪರಿಷತ್‌ಗೆ ಮೂವರು ಸದಸ್ಯರ ನಾಮನಿರ್ದೇಶನ  ಮಾಡಬೇಕಾಗಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮೋಹನ್ ಕೊಂಡಜ್ಜಿ, ಪಿ.ಆರ್.ರಮೇಶ್ ಮತ್ತು ಸಿ.ಎಂ.ಲಿಂಗಪ್ಪ ಹೆಸರುಗಳನ್ನು ಅಂತಿಮಗೊಳಿಸಿ ರಾಜ್ಯಪಾಲರ ಅನುಮತಿಗಾಗಿ ಕಳುಹಿಸಿಕೊಟ್ಟಿತ್ತು.
 
ಆದರೆ, ರಾಜ್ಯಪಾಲರು ಇಬ್ಬರ ಹೆಸರಿಗೆ ಒಪ್ಪಿಗೆ ನೀಡಿದ್ದು, ಶಿಕ್ಷಣ, ಸಮಾಜ ಸೇವೆ ಕೋಟಾದಲ್ಲಿ ಸಿ.ಎಂ. ಲಿಂಗಪ್ಪ ಹೆಸರು ಬರುವುದಿಲ್ಲವೆಂದು ಆಕ್ಷೇಪಿಸಿದ್ದಾರೆ. ಸಕ್ರಿಯ ರಾಜಕೀಯದಲ್ಲಿರುವ ವ್ಯಕ್ತಿಯನ್ನು ಸಾಮಾಜಿಕ ಸೇವೆ ವ್ಯಾಪ್ತಿಗೆ ತರಲು ಸಾಧ್ಯವಿಲ್ಲ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ರಾಜ್ಯಪಾಲರ ಕಚೇರಿ ಕಾರಣ ನೀಡಿದೆ.
 
ರಾಜ್ಯಪಾಲರನ್ನು ಭೇಟಿಯಾಗಿ ಸಿ.ಎಂ.ಲಿಂಗಪ್ಪ ಅವರ ಬಗ್ಗೆ ಚರ್ಚೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments