ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

Krishnaveni K
ಬುಧವಾರ, 11 ಜೂನ್ 2025 (09:27 IST)
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತವಾದ ಬಳಿಕ ಸರ್ಕಾರದ ಮೇಲೆ ಅಪವಾದ ಬಂದಾಗ ರಾಜ್ಯಪಾಲರನ್ನು ಯಾರು ಆಹ್ವಾನಿಸಿದ್ದು ಎಂದು ನಮಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ರಾಜಭವನದಿಂದಲೇ ಇದಕ್ಕೆ ಸ್ಪಷ್ಟನೆ ಬಂದಿದ್ದು ಸಿಎಂ ಕಡೆಯಿಂದಲೇ ಆಹ್ವಾನ ಬಂದಿದ್ದು ಎನ್ನಲಾಗಿದೆ. ಈಗೇನಂತಾರೆ ಸಿಎಂ ಸಿದ್ದರಾಮಯ್ಯ ಎನ್ನುವುದು ಎಲ್ಲರ ಪ್ರಶ್ನೆಯಾಗಿದೆ.

ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಹೊಣೆಯನ್ನು ಪೊಲೀಸರು ಮತ್ತು ಆರ್ ಸಿಬಿ, ಕೆಎಸ್ ಸಿಎ ಮೇಲೆ ಹೊರಿಸಲು ಸರ್ಕಾರ ಪ್ರಯತ್ನ ನಡೆಸುತ್ತಿರುವುದು ಈಗ ರಹಸ್ಯವಾಗೇನೂ ಉಳಿದಿಲ್ಲ. ಸ್ವತಃ ಸಿಎಂ ಈ ಕಾರ್ಯಕ್ರಮ ಆಯೋಜಿಸಿದ್ದು ನಾವಲ್ಲ, ನಮಗೆ ಮುಜುಗರವಾಗಲ್ಲ ಎಂದಿದ್ದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಸುವುದೂ ನಮ್ಮ ಯೋಜನೆಯಾಗಿರಲಿಲ್ಲ. ರಾಜ್ಯಪಾಲರನ್ನು, ಇತರ ಗಣ್ಯರನ್ನು ಯಾರು ಆಹ್ವಾನಿಸಿದ್ದು ನಮಗೆ ಗೊತ್ತಿಲ್ಲ ಎಂದಿದ್ದರು. ಆದರೆ ಇದಕ್ಕೀಗ ರಾಜಭವನದಿಂದಲೇ ಉತ್ತರ ಬಂದಿದೆ. ರಾಜಭವನದ ಉತ್ತರ ಈಗ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ರಾಜ್ಯಪಾಲರ ಉತ್ತರದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಮಗೆ ಗೊತ್ತೇ ಇಲ್ಲ ಎಂದಿರುವುದು ಸುಳ್ಳೇ ಅಥವಾ ಜವಾಬ್ಧಾರಿಯಿಂದ ಜಾರಿಕೊಳ್ಳುವ ಯತ್ನವೇ ಎಂಬ ಅನುಮಾನ ಶುರುವಾಗಿದೆ. ಮುಖ್ಯಮಂತ್ರಿ ಕಡೆಯಿಂದ ಅಧಿಕೃತ ಆಹ್ವಾನ ಬಂದಿದ್ದಕ್ಕೇ ರಾಜ್ಯಪಾಲರು ಭಾಗಿಯಾಗಿದ್ದರು ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments