Webdunia - Bharat's app for daily news and videos

Install App

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ರಾಜ್ಯಪಾಲ ವಜುಭಾಯಿವಾಲಾ

Webdunia
ಶನಿವಾರ, 26 ಜನವರಿ 2019 (10:17 IST)
ಬೆಂಗಳೂರು : 70ನೇ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಕಲ ಸಿದ್ದತೆ ನಡೆದಿದ್ದು, ಇದೀಗ ಮಾನ್ಯ ರಾಜ್ಯಪಾಲ ವಜುಭಾಯಿವಾಲಾರು ಕಾರ್ಯಕ್ರಮವನ್ನು ಧ್ವಜಾರೋಹಣ ನೇರವೆರಿಸಿದ್ದಾರೆ.

ನಂತರ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಶುಭಾಶಯ ತಿಳಿಸಿದ್ದಾರೆ. ‘ಕೊಡಗು, ಮಲೆನಾಡು ಭಗದಲ್ಲಿ ಪ್ರಾಕೃತಿಕ ವಿಕೋಪವಾಗಿತ್ತು. ಕೇಂದ್ರ, ರಾಜ್ಯದ ಸಹಭಾಗಿತ್ವದಲ್ಲಿ ತುರ್ತು ಪರಿಹಾರ ಕಾರ್ಯ ಕೈಗೊಳ್ಳಲಾಗಿತ್ತು.ಅಲ್ಲದೇ ರಾಜ್ಯದ ಬಹುತೇಕ ತಾಲೂಕುಗಳು ಬರಗಾಲದಿಂದ ತತ್ತರಿಸಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲ ಪರಿಸ್ಥಿತಿ ಇದೆ ಎಂಬುದಾಗಿ ತಿಳಿಸಿದ್ದಾರೆ.

 

ಹಾಗೇ ‘ಬಡವರ ಬಂಧು ಯೋಜನೆಯಿಂದ ವ್ಯಾಪಾರಿಗಳಿಗೆ ಅನುಕೂಲವಾಗಿದೆ. ರಾಜ್ಯದಲ್ಲಿ ರೈತರ ಸಾಲಮನ್ನಾ ಯೋಜನೆ ಜಾರಿ ಪ್ರಗತಿಯಲ್ಲಿದೆ. ನರೇಗಾ ಯೋಜನೆಯಡಿ ಹಲವು ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಕೈಗೊಳ್ಳಲಾಗಿದೆ. 309 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಸ್ವಚ್ಛ ಭಾರತ್ ಯೋಜನೆ ಮೂಲಕ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಮುಖ್ಯಮಂತ್ರಿ ಆವಾಸ್ ಯೋಜನೆಯಡಿ ಸೂರಿಲ್ಲದವರಿಗೆ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. 2014 ರಿಂದ 2019ರವರೆಗೆ ಉದ್ಯೋಗ ಸೃಷ್ಠಿಗೆ ಯೋಜನೆ ಅನುಮೋದನೆ ನೀಡಲಾಗಿದೆ ‘ ಎಂದು ಅವರು ತಿಳಿಸಿದ್ದಾರೆ.

 

ಇನ್ನೂ 70ನೇ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ವಿವಿಧ ಶಾಲೆಗಳ ಮಕ್ಕಳು, ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ., ಸೇವಾದಳ ಸೇರಿದಂತೆ 38 ತುಕಡಿಗಳು, ಭಾರತೀಯ ಸೇನಾಪಡೆಯ ಅಶ್ವಾರೋಹಿ ಪಡೆ ಪಥಸಂಚಲನದಲ್ಲಿ ಭಾಗಿಯಾಗಿವೆ. ಇನ್ನೂ ಧ್ವಜಾರೋಹಣದಲ್ಲಿ ಸಿಎಂ‌ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮಾಣಿಕ್ ಷಾ ಮೈದಾನದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

 

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಸಾರ್ವಜನಿಕರು, ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಮೈದಾನದೊಳಗೆ ನೀರಿನ ಬಾಟಲಿ, ಸಿಗರೇಟ್, ಬೆಂಕಿ ಪೊಟ್ಟಣ, ಕರಪತ್ರಗಳು ಮತ್ತು ಮಾದಕವಸ್ತು ಯಾವುದೇ ರೀತಿಯ ಬಾವುಟ ಮೈದಾನದೊಳಗೆ ತರಲು ನಿಷೇಧ ಹೇರಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments