Webdunia - Bharat's app for daily news and videos

Install App

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

Krishnaveni K
ಶನಿವಾರ, 7 ಜೂನ್ 2025 (17:20 IST)
ಬೆಂಗಳೂರು: ಆರ್ಥಿಕ ಅಪರಾಧ ಇರುವವರ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಟೀಕಿಸಿದ್ದಾರೆ.
 
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರ್‍ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಜನ ಸತ್ತಿದ್ದು, ಈ ದುರ್ಘಟನೆಗೆ ಸಿದ್ದರಾಮಯ್ಯನವರ ಸರ್ಕಾರ ನೇರ ಹೊಣೆ. ಆದ್ದರಿಂದ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.

ಹಿಂದಿನ ಸರಕಾರ ಈ ಆರ್ಥಿಕ ಅಪರಾಧಿ ಕಂಪನಿಗಳ ಸಂಭ್ರಮಾಚಾರಣೆಗೆ ಮುಂದಾಗಿಲ್ಲ ಹಾಗೂ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿಲ್ಲ. ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವಂತದ್ದು ಸಿದ್ದರಾಮಯ್ಯನವರ ಸರ್ಕಾರ ಎಂದು ಟೀಕಿಸಿದರು. ಮೊನ್ನೆ ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ನೇರವಾಗಿ ಕರ್ನಾಟಕ ಸರ್ಕಾರವೇ ಹೊಣೆಗಾರ ಎಂದು ಆರೋಪಿಸಿದರು. 
ದೇಶದ ಇಬ್ಬರು ಆರ್ಥಿಕ ಅಪರಾಧಿಗಳಿಗೆ ಸಂಬಂಧಿಸಿದ ಕಂಪನಿಗಳಲ್ಲಿ ಒಂದನೇಯದ್ದು ಆರ್‍ಸಿಬಿ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’. ಇದು ವಿಸ್ಕಿ ಮಾರಾಟಕ್ಕಾಗಿ ಹುಟ್ಟಿಕೊಂಡ ವಿಜಯ್ ಮಲ್ಯರವರ ಒಂದು ಕಂಪನಿ. ಎರಡನೇಯದ್ದು ‘ಐಪಿಎಲ್’ ಲಲಿತ್ ಮೋದಿಯವರದ್ದು. ಇವರು ಕೂಡ ದೇಶದ ಆರ್ಥಿಕ ಅಪರಾಧಿ. ಇಬ್ಬರು ಆರ್ಥಿಕ ಅಪರಾಧಿಗಳು ಅಪರಾಧವನ್ನು ಮಾಡಿ ದೇಶದ ಖಜಾನೆಗೆ ಕನ್ನ ಹಾಕಿ ದೇಶ ಬಿಟ್ಟು ಹೋದವರು ಎಂದು ಅವರು ಟೀಕಿಸಿದರು. 

ಯಾವ ಕಾರಣಕ್ಕಾಗಿ ವಿಜಯ ಮಲ್ಯ ಅವರ ಆರ್.ಸಿ.ಬಿ. ಕಂಪನಿ ಮತ್ತು ಲಲಿತ್ ಮೋದಿಯವರ ಐಪಿಎಲ್ ಕಂಪನಿಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದೀರಿ ಎಂಬುದನ್ನು ಈ ದೇಶದ ಜನತೆ ಮತ್ತ ನಾಡಿನ ಜನತೆ ತಿಳಿಸಬೇಕಾಗಿತ್ತು ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments