Select Your Language

Notifications

webdunia
webdunia
webdunia
webdunia

ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆ

ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆ
ಬೆಂಗಳೂರು , ಮಂಗಳವಾರ, 17 ಜನವರಿ 2023 (06:50 IST)
ಬೆಂಗಳೂರು : ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.
 
ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಹಿನ್ನೆಲೆ ಮೈಸೂರು ವಿಜಯನಗರ ಪೊಲೀಸರು ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಸಿಐಡಿ ಪೊಲೀಸರಿಗೆ ಎಸಿಪಿ ಶಿವಶಂಕರ್ ನೀಡಲಿದ್ದಾರೆ.

ಈ ಬಗ್ಗೆ ನ್ಯಾಯಾಲಯಕ್ಕೆ ಮೈಸೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ಕಾರಣಕ್ಕೆ ಜನವರಿ 25 ರವರೆಗೆ ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಶೀಲ ಶಂಕಿಸಿ ಪತ್ನಿ ಉಸಿರುಗಟ್ಟಿಸಿಕೊಂದು ಎಸ್ಕೇಪ್ ಆದ ಪತಿ