Webdunia - Bharat's app for daily news and videos

Install App

ಫೋನ್ ಟ್ಯಾಪಿಂಗ್ ಬಗ್ಗೆ ತನಿಖೆಯಾಗಲಿ: ಸರ್ಕಾರಕ್ಕೆ ಅಶೋಕ್ ಸವಾಲ್

Webdunia
ಶುಕ್ರವಾರ, 22 ಸೆಪ್ಟಂಬರ್ 2017 (14:44 IST)
ಬೆಂಗಳೂರು: ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಮಾಜಿ ಸಿಎಂ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಮುಖ್ಯಮಂತ್ರಿಗಳು ಡಿನೋಟಿಫಿಕೇಷನ್ ಮಾಡಿದ್ದಾರೆ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡ್ತಿದೆ. ಬಿಎಸ್ ವೈ ಅವರನ್ನು ಎಲ್ಲೂ ಓಡಾಡದಂತೆ ಮಾಡಲು ಹುನ್ನಾರ ಮಾಡ್ತಿದ್ದಾರೆ. ಬಿಎಸ್ ವೈಗೆ ಕಿರುಕುಳ ನೀಡಲು ವಿನಾಕಾರಣ ಸುಳ್ಳು ದೂರು ದಾಖಲಿಸಿದ್ದಾರೆ. ಈಗ ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಂತರ ತಡೆ ನೀಡಿದ್ದು, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ವಿರುದ್ಧ ತಾವು ಮಾಡಿರುವ ಫೋನ್ ಟ್ಯಾಪಿಂಗ್ ಆರೋಪವನ್ನು ಮಾಜಿ ಡಿಸಿಎಂ ಆರ್.ಅಶೋಕ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಫೋನ್ ಟ್ಯಾಪಿಂಗ್ ಮಾಡ್ತಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಫೋನ್ ಕೂಡಾ ಟ್ಯಾಪ್ ಆಗಿತ್ತು. ಇದನ್ನ ಅವರೇ ಹೇಳಿದ್ದಾರೆ. ಮಾಜಿ‌ ಸಿಎಂ ಕುಮಾರಸ್ವಾಮಿ‌ ಕೂಡಾ ಫೋನ್ ಟ್ಯಾಪಿಂಗ್ ಬಗ್ಗೆ ಹೇಳಿದ್ರು. ರಾಜ್ಯ ಸರ್ಕಾರಕ್ಕೆ ಚಾಲೆಂಜ್ ಮಾಡ್ತೀನಿ. ಫೋನ್ ಟ್ಯಾಪಿಂಗ್ ಕುರಿತು ಒಂದು ತನಿಖೆ ನಡೆಸಿ‌ ಆಗ ಸತ್ಯಾಸತ್ಯತೆ ಹೊರಬರುತ್ತೆ. ನನಗೆ ಫೋನ್ ಟ್ಯಾಪಿಂಗ್ ಆಗೋದು ‌ಹೇಗೆ ಅಂತ ಗೊತ್ತು. ನಿಖರವಾಗಿ ಅಂಕಿ ಅಂಶದ ಸಮೇತ ಹೇಳ್ತಿದ್ದೇನೆ. ಸಿಎಂ‌ ಈ ಬಗ್ಗೆ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆ ನಡೆಸಲಿ. ಆಗ ಎಲ್ಲಾ ಸತ್ಯ ಹೊರಬರುತ್ತೆ. ತನಿಖೆಗೆ ಆದೇಶ ನೀಡಿದ್ರೆ ದಾಖಲೆ ನೀಡಲು ನಾನು ಸಿದ್ಧ. ತನಿಖೆಯಲ್ಲಿ ಟ್ಯಾಪಿಂಗ್ ಆಗ್ತಿಲ್ಲ ಅಂತ ಬಂದ್ರೆ ಯಾವುದೇ ಕ್ರಮಕ್ಕೂ ನಾನು ರೆಡಿ ಎಂದು ರಾಜ್ಯ ಸರ್ಕಾರಕ್ಕೆ ಅಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments