ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಕಟ್: ಅಶೋಕ್ ಗೆಹ್ಲೋಟ್

Webdunia
ಶುಕ್ರವಾರ, 11 ಆಗಸ್ಟ್ 2023 (13:57 IST)
ಜೈಪುರ : ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಪ್ರಕರಣಗಳಿಂದ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದ ರಾಜಸ್ಥಾನ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯದಲ್ಲಿ ಅತ್ಯಾಚಾರ ಆರೋಪಿಗಳು ಹಾಗೂ ಅಪರಾಧ ಕೃತ್ಯ ಹಿನ್ನೆಲೆ ಉಳ್ಳವರಿಗೆ ಸರ್ಕಾರಿ ಉದ್ಯೋಗ ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ.

ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧ ಕೃತ್ಯಗಳನ್ನ ತಡೆಯಲು ಶಿಸ್ತು ಕ್ರಮದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಾಲಕಿಯರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ ಇತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸರ್ಕಾರಿ ಉದ್ಯೋಗ ನಿಷೇಧಿಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. 

ಅಪರಾಧ ಹಿನ್ನೆಲೆ ಉಳ್ಳವರನ್ನು ಪತ್ತೆ ಮಾಡಲು ಪೊಲೀಸ್ ಠಾಣೆಗಳಲ್ಲಿ ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳ ಕುರಿತು ಬಿಜೆಪಿ ಆಡಳಿತ ಕಾಂಗ್ರೆಸ್ ಪಕ್ಷದ ಮೇಲೆ ಟೀಕಾ ಪ್ರಹಾರ ನಡೆಸುತ್ತಿರುವ ನಡುವೆ ಸರ್ಕಾರ ಈ ಘೋಷಣೆ ಮಾಡಿದೆ.

ಇದೇ ಆಗಸ್ಟ್ 2ರಂದು ಬಿಲ್ವಾರ ಜಿಲ್ಲೆಯ ಕಲ್ಲಿದ್ದಲು ಕುಲುಮೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಅತ್ಯಾಚಾರ ಎಸಗಿದ ಬಳಿಕ ಬಾಲಕಿಯನ್ನ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿ 7 ಜನರನ್ನ ಬಂಧಿಸಲಾಗಿದೆ. ಈ ಪ್ರಕರಣದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಅಪರಾಧ ಕೃತ್ಯ ಹಿನ್ನೆಲೆ ಉಳ್ಳವರಿಗೆ ಸರ್ಕಾರಿ ಉದ್ಯೋಗ ನೀಡದಂತೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments