Webdunia - Bharat's app for daily news and videos

Install App

PRESS=ಒತ್ತಿ…? ಸರ್ಕಾರದ ಕಾರ್ಯಕ್ರಮದಲ್ಲೇ ತಪ್ಪು ಪದ ಬಳಕೆ

Webdunia
ಮಂಗಳವಾರ, 26 ಸೆಪ್ಟಂಬರ್ 2017 (00:01 IST)
ಬೆಂಗಳೂರು: ಸರ್ಕಾರಿ ಅಥವಾ ಖಾಸಗಿ ಯಾವುದೇ ಕಾರ್ಯಕ್ರಮ ಆಗಿರಲಿ. ಅಲ್ಲಿ ಮಾಧ್ಯಮದವರಿಗೆ ಪ್ರತ್ಯೇಕ ಆಸನಗಳನ್ನ ಮೀಸಲಿಟ್ಟಿರುತ್ತಾರೆ. ಆದರೆ ಇಂದು ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಆಯೋಜಕರು ಮಾಡಿದ ಎಡವಟ್ಟಿನಿಂದ ಸರ್ಕಾರ ತೀವ್ರ ಮುಜುಗರಕ್ಕೀಡಾಗಿದೆ.

ಇಂದು ಸಂಜೆ ಖಾಸಗಿ ಹೋಟೆಲ್ ವೊಂದರಲ್ಲಿ ನವ ಕರ್ನಾಟಕ ಮುನ್ನೋಟ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಹೀಗಾಗಿ ಮಾಧ್ಯಮದವರನ್ನು ಆಹ್ವಾನಿಸಲಾಗಿತ್ತು. ಇದಕ್ಕೆಂದೇ ಪ್ರತ್ಯೇಕ ಆಸನ ವ್ಯವಸ್ಥೆಯೂ ಇತ್ತು. ಮೀಡಿಯಾ ಗ್ಯಾಲರಿ ಎಂದು ಸೂಚಿಸಲು ನಾಮಫಲಕ ಹಾಕಲಾಗಿತ್ತು. ಈ ನಾಮಫಲಕದಲ್ಲಿ ಇಂಗ್ಲೀಷ್ ನಲ್ಲಿ PRESS ಎಂದಿತ್ತು. ಅದನ್ನೇ ಕನ್ನಡಕ್ಕೆ ಅನುವಾದಿಸುವಾಗ ಮಾಧ್ಯಮ ಎಂಬುದರ ಬದಲಾಗಿ `ಒತ್ತಿ’ ಎಂಬ ಪದ ಬಳಸಿದ್ದಾರೆ.

ಇನ್ನು Additional Chief Secretaries ಎಂಬುದರ ಕನ್ನಡ ಅನುವಾದವನ್ನು ಅಪಾರ ಮುಖ್ಯ ಕಾರ್ಯದರ್ಶಿಗಳು ಎಂದು ಮಾಡಲಾಗಿದೆ. ಸದ್ಯ ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದ್ದು, ಕಾರ್ಯಕ್ರಮ ಆಯೋಜಕರ ವಿರುದ್ಧ ಟೀಕೆಗಳು ವ್ಯಕ್ತವಾಗಿತ್ತಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಖಾರವಾಗಿ ಟ್ವೀಟ್ ಮಾಡಿದ್ದಾರೆ. `ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಕೊಟ್ಟ ಒಕ್ಕಣೆ ನೋಡಿ ಕಾಂಗ್ರೆಸ್ ಸರ್ಕಾರದಿಂದ ಕನ್ನಡ ಉಳಿವು ನಿರೀಕ್ಷಿಸಲು ಸಾಧ್ಯವೇ? ಎಂದು ಡಿವಿಎಸ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments